ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಂಬಳ’ ಪರ ಅಭಿಯಾನ ಆರಂಭ

Last Updated 22 ಜನವರಿ 2017, 7:54 IST
ಅಕ್ಷರ ಗಾತ್ರ

ಬೆಂಗಳೂರು: ಜಲ್ಲಿಕಟ್ಟು ಹೋರಾಟ ಯಶಸ್ವಿಯಾದ ಬೆನ್ನಲ್ಲೇ ದಕ್ಷಿಣ ಕನ್ನಡದ ಜಾನಪದ ಕ್ರೀಡೆ ‘ಕಂಬಳ’ದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೋರಾಟಗಳು ಆರಂಭವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಕಂಬಳ ಪರ ಅಭಿಯಾನ ಬೆಂಗಳೂರಿನ ‘ಫ್ರೀಡಂ ಪಾರ್ಕ್‌’ಗೆ ಸ್ಥಳಾಂತರಗೊಂಡಿದೆ.

ಇದರ ಅಂಗವಾಗಿ ಭಾನುವಾರ ವಿವಿಧ ಸಂಘಟನೆಗಳ ಸದಸ್ಯರು ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದು, ಕಂಬಳ ಪರ ಘೋಷಣೆ ಕೂಗಿದರು.

ಕಂಬಳ ದಕ್ಷಿಣ ಕನ್ನಡದ ಗ್ರಾಮೀಣ ಬಡ ಜನರ ಕ್ರೀಡೆ. ಇದು, ನಮ್ಮ ಸಂಸ್ಕೃತಿಯೊಂದಿಗೆ ಸಮ್ಮಿಳಿತವಾಗಿದೆ. ಇದನ್ನು ನಿಷೇಧಿಸಿರುವುದು ನಮ್ಮ ಸಂಸ್ಕೃತಿಯ ಮೇಲೆ ನಿರ್ಬಂಧ ಹೇರಿ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಜಲ್ಲಿಕಟ್ಟು ವಿಚಾರವಾಗಿ ತಮಿಳುನಾಡು ಒಗ್ಗಟ್ಟು ಪ್ರದರ್ಶಿಸಿದ ರೀತಿಯಲ್ಲೇ ಕನ್ನಡಿಗರು ಕಂಬಳದ ಪರ ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ, ಜಲ್ಲುಕಟ್ಟು ಬಿಕ್ಕಟ್ಟು ಪರಿಹರಿಸುವಲ್ಲಿ ತೋರಿದ ಆಸಕ್ತಿಯನ್ನು ಕಂಬಳದ ಮೇಲಿನ ನಿಷೇಧ ತೆರವಿಗೂ ತೋರಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT