ಮುಖ್ಯವಾಗಿ ಕವಿ, ನಾಟಕಕಾರರಾಗಿ ಇವರು ಜನಪ್ರಿಯರು. ಇವರು ಬರೆದ ಕೃತಿಗಳು ಹಲವು ಹತ್ತು. ಅದರಲ್ಲಿ ಹೇಳತೇನ ಕೇಳ, ತಕರಾರಿನವರು, ಸಾವಿರದ ನೆರಳು, ಬೆಳ್ಳಿ ಮೀನು ಮುಖ್ಯ ಕವನಸಂಕಲನಗಳು. ಜೋಕುಮಾರಸ್ವಾಮಿ ಇವರ ಸುಪ್ರಸಿದ್ಧ ನಾಟಕ. ಅಲ್ಲದೆ ಋಷ್ಯಶೃಂಗ, ಕಾಡುಕುದುರೆ, ಹರಕೆಯ ಕುರಿ, ಅಂಗಿ ಮ್ಯಾಲಂಗಿ, ಬೆಪ್ಪುತಕ್ಕಡಿ ಬೋಳೆ, ಸಿರಿ ಸಂಪಿಗೆ, ಶಿಖರ ಸೂರ್ಯ ಇವರ ಇನ್ನಿತರ ಮುಖ್ಯ ನಾಟಕಗಳು.