<p><strong>ಸಿಂದಗಿ:</strong> ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದ ಹಿರೇಮಠದ ಪೀಠಾಧೀಶ ನೂರಂದೇಶ್ವರ ಶಿವಾಚಾರ್ಯ (35) ಅವರನ್ನು ಸೋಮವಾರ ರಾತ್ರಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.<br /> <br /> ಕೊಡಲಿಯಿಂದ ತಲೆ ಮತ್ತು ಭುಜಕ್ಕೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿ ಅವರನ್ನು ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗದಲ್ಲೇ ಮೃತರಾದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಶ್ರೀಮಠದ ಆಸ್ತಿಯಲ್ಲಿ ತಮಗೆ ಪಾಲು ನೀಡುವಂತೆ ಕುಟುಂಬದ ಕೆಲವು ಸದಸ್ಯರು ನ್ಯಾಯಾಲಯದ ಕಟ್ಟೆ ಹತ್ತಿದ್ದರು. ನ್ಯಾಯಾಲಯದಲ್ಲಿ ಸ್ವಾಮೀಜಿ ಪರವಾಗಿ ತೀರ್ಪು ಬಂದಿದ್ದರಿಂದ ಕೊಲೆ ನಡೆದಿದೆ ಎನ್ನಲಾಗಿದೆ.<br /> <br /> ಸ್ವಾಮೀಜಿ ಅವರ ಅಣ್ಣ ಮಹಾಂತಯ್ಯ, ಆತನ ಪುತ್ರ ಗುರು ಸ್ವಾಮಿ, ಸೋದರ ಸಂಬಂಧಿಗಳಾದ ಗುರುಲಿಂಗಯ್ಯ, ನೂರಂದಯ್ಯ ಅವರ ವಿರುದ್ಧ ಸ್ವಾಮೀಜಿ ಯವರ ಇನ್ನೊಬ್ಬ ಅಣ್ಣ ರುದ್ರಯ್ಯ ಮಳೆಯ್ಯ ಹಿರೇಮಠ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> ಜಿಲ್ಲಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಡಿ.ಸಿ. ರಾಜಪ್ಪ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> <strong>ಅಂತ್ಯಸಂಸ್ಕಾರ:</strong> ಸಿಂದಗಿ ಸಾರಂಗಮಠ, ವಿರಕ್ತಮಠ, ಸೊನ್ನ, ಜೇರಟಗಿ, ಕೋರಳ್ಳಿ, ನಾದ, ಸೊಲ್ಲಾಪುರ ಮಠಗಳ ಶ್ರೀಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಠದ ಆವರಣದಲ್ಲಿ ಮಂಗಳವಾರ ನಡೆಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದ ಹಿರೇಮಠದ ಪೀಠಾಧೀಶ ನೂರಂದೇಶ್ವರ ಶಿವಾಚಾರ್ಯ (35) ಅವರನ್ನು ಸೋಮವಾರ ರಾತ್ರಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.<br /> <br /> ಕೊಡಲಿಯಿಂದ ತಲೆ ಮತ್ತು ಭುಜಕ್ಕೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ವಾಮೀಜಿ ಅವರನ್ನು ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗದಲ್ಲೇ ಮೃತರಾದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಶ್ರೀಮಠದ ಆಸ್ತಿಯಲ್ಲಿ ತಮಗೆ ಪಾಲು ನೀಡುವಂತೆ ಕುಟುಂಬದ ಕೆಲವು ಸದಸ್ಯರು ನ್ಯಾಯಾಲಯದ ಕಟ್ಟೆ ಹತ್ತಿದ್ದರು. ನ್ಯಾಯಾಲಯದಲ್ಲಿ ಸ್ವಾಮೀಜಿ ಪರವಾಗಿ ತೀರ್ಪು ಬಂದಿದ್ದರಿಂದ ಕೊಲೆ ನಡೆದಿದೆ ಎನ್ನಲಾಗಿದೆ.<br /> <br /> ಸ್ವಾಮೀಜಿ ಅವರ ಅಣ್ಣ ಮಹಾಂತಯ್ಯ, ಆತನ ಪುತ್ರ ಗುರು ಸ್ವಾಮಿ, ಸೋದರ ಸಂಬಂಧಿಗಳಾದ ಗುರುಲಿಂಗಯ್ಯ, ನೂರಂದಯ್ಯ ಅವರ ವಿರುದ್ಧ ಸ್ವಾಮೀಜಿ ಯವರ ಇನ್ನೊಬ್ಬ ಅಣ್ಣ ರುದ್ರಯ್ಯ ಮಳೆಯ್ಯ ಹಿರೇಮಠ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> ಜಿಲ್ಲಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಡಿ.ಸಿ. ರಾಜಪ್ಪ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.<br /> <br /> <strong>ಅಂತ್ಯಸಂಸ್ಕಾರ:</strong> ಸಿಂದಗಿ ಸಾರಂಗಮಠ, ವಿರಕ್ತಮಠ, ಸೊನ್ನ, ಜೇರಟಗಿ, ಕೋರಳ್ಳಿ, ನಾದ, ಸೊಲ್ಲಾಪುರ ಮಠಗಳ ಶ್ರೀಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ಮಠದ ಆವರಣದಲ್ಲಿ ಮಂಗಳವಾರ ನಡೆಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>