ಬೆಂಗಳೂರು (ಪಿಟಿಐ): ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ಅವರ ಪುತ್ರ, ಪಾಲಿಕೆ ಸದಸ್ಯ ಕಟ್ಟಾ ಜಗದೀಶ ಹಾಗೂ ಇಟಾಸ್ಕಾ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಎಸ್.ವಿ.ಶ್ರೀನಿವಾಸ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಬುಧವಾರ ನವೆಂಬರ್ 26ರ ವರೆಗೆ ವಿಸ್ತರಿಸಿದೆ.
ಈ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯು ಬುಧವಾರ ಕೊನೆಗೊಂಡ ಹಿನ್ನೆಲೆಯಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ಈಗ ನವೆಂಬರ್ 26ರ ವರೆಗೆ ವಿಸ್ತರಿಸಿ ಆದೇಶ ನೀಡಿದರು.