<p><strong>ಬೆಂಗಳೂರು:</strong> ‘ಕಬ್ಬಿನ ದರ ನಿರ್ಧಾರಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಡಿ. 9ರಂದು ಸಭೆ ನಡೆಸಲಿದ್ದೇನೆ. ಆ ಸಭೆಯಲ್ಲಿ ಗೊಂದಲಗಳು ನಿವಾರಣೆಯಾಗಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ನ್ಯಾನೊ ತಂತ್ರಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಅವರು,ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.<br /> <br /> ‘ಸರ್ಕಾರ ನಿಗದಿ ಮಾಡಿದ ದರ ನೀಡಲು ಹಲವು ಕಾರ್ಖಾನೆಗಳ ಮಾಲೀಕರು ಈಗಾಗಲೇ ಸಮ್ಮತಿ ಸೂಚಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಈ ವಿಷಯವಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ. ಆದರೆ, ಡಿ. 9ರಂದು ನಡೆಯುವ ಸಭೆಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ’ ಎಂದು ಹೇಳಿದರು.<br /> <br /> ‘ಕಬ್ಬಿನ ವಿಷಯವಾಗಿ ಚರ್ಚಿಸಲು ನವದೆಹಲಿಯಲ್ಲಿ ಡಿ. 6ರಂದು ಪ್ರಧಾನ ಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಲಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಬ್ಬಿನ ದರ ನಿರ್ಧಾರಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಡಿ. 9ರಂದು ಸಭೆ ನಡೆಸಲಿದ್ದೇನೆ. ಆ ಸಭೆಯಲ್ಲಿ ಗೊಂದಲಗಳು ನಿವಾರಣೆಯಾಗಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ನ್ಯಾನೊ ತಂತ್ರಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಅವರು,ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.<br /> <br /> ‘ಸರ್ಕಾರ ನಿಗದಿ ಮಾಡಿದ ದರ ನೀಡಲು ಹಲವು ಕಾರ್ಖಾನೆಗಳ ಮಾಲೀಕರು ಈಗಾಗಲೇ ಸಮ್ಮತಿ ಸೂಚಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಈ ವಿಷಯವಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ. ಆದರೆ, ಡಿ. 9ರಂದು ನಡೆಯುವ ಸಭೆಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ’ ಎಂದು ಹೇಳಿದರು.<br /> <br /> ‘ಕಬ್ಬಿನ ವಿಷಯವಾಗಿ ಚರ್ಚಿಸಲು ನವದೆಹಲಿಯಲ್ಲಿ ಡಿ. 6ರಂದು ಪ್ರಧಾನ ಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಲಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>