‘ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಪ್ರತಿನಿಧಿಸಿದ್ದ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಅವಮಾನಕರ ಸೋಲಾಗಿದೆ. ಐತಿಹಾಸಿಕ ಜಯ ಸಾಧಿಸಿರುವ ಎಸ್ಪಿ ಮತ್ತು ಬಿಎಸ್ಪಿಗೆ ಅಭಿನಂದನೆಗಳು. ಈ ಗೆಲುವಿನಲ್ಲಿ ಬಿಜೆಪಿಯೇತರ ಪಕ್ಷಗಳ ಒಗ್ಗಟ್ಟು ಪ್ರಮುಖ ಪಾತ್ರ ವಹಿಸಿದೆ. ಯೋಗಿ ಆದಿತ್ಯನಾಥ್ ಅವರು ಅಭಿವೃದ್ಧಿ ಬಗ್ಗೆ ಕರ್ನಾಟಕದಲ್ಲಿ ಉಪನ್ಯಾಸ ನೀಡುವ ಸಮಯವನ್ನು ಕಡಿಮೆ ಮಾಡಬೇಕು’ ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.