ನಾನು ಪಂಜಾಬ್ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದೇನೆ. ಈಚೆಗೆ ಚಿಂಚೋಳಿ ತಾಲ್ಲೂಕು ಕೋಡ್ಲಿಯಲ್ಲಿ ಸಿಖ್ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಈ ವಿಷಯ ಪಂಜಾಬ್ನಲ್ಲಿ ವೈರಲ್ ಆಗಿದೆ. ಕರ್ನಾಟಕದಲ್ಲಿ ಸಿಖ್ಖರಿಗೆ ರಕ್ಷಣೆ ಇಲ್ಲ ಎಂಬ ಕೂಗು ಎದ್ದಿದೆ. ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರದ ಗಮನ ಸೆಳೆಯಲು ಏಕಾಂಗಿ ಧರಣಿ ನಡೆಸಿದ್ದೇನೆ ಎಂದು 'ಪ್ರಜಾವಾಣಿ'ಗೆ ತಿಳಿಸಿದರು.