ಗೌರಿ ಹತ್ಯೆ ಪ್ರಕರಣದಲ್ಲಿ 6 ಆರೋಪಿಗಳನ್ನು ಬಂಧಿಸಿರುವ ಎಸ್ಐಟಿ, ಐವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ. ಅದೇ ಕಾರಣಕ್ಕೆ ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಅವರನ್ನು ಸಂಪರ್ಕಿಸಿರುವ ಇಲಾಖೆಯ ಕಾರ್ಯದರ್ಶಿ ಉಮೇಶ್ ಕುಮಾರ್, ‘ಗೌರಿ ಹತ್ಯೆ ತನಿಖೆಯನ್ನು ಚುರುಕುಗೊಳಿಸಿ. ಜತೆಗೆ, ಕಲಬುರ್ಗಿ ಹತ್ಯೆ ಸಂಬಂಧ ಏನಾದರೂ ಮಾಹಿತಿ ಸಿಕ್ಕರೆ ತಿಳಿಸಿ. ಆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನಿಮ್ಮ ತಂಡಕ್ಕೆ ವಹಿಸುವ ಬಗ್ಗೆ ಯೋಚಿಸುತ್ತಿದ್ದೇವೆ’ ಎಂದು ಹೇಳಿರುವುದಾಗಿ ಗೊತ್ತಾಗಿದೆ.