<p>ಬೆಂಗಳೂರು: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡಲು ಅಗತ್ಯ ಯೋಜನೆಯನ್ನು ರೂಪಿಸಲಾಗಿದೆ’ ಎಂದು ಇಲಾಖೆಯ ನೂತನ ನಿರ್ದೇಶಕ ಕೆ.ಎ. ದಯಾನಂದ ಹೇಳಿದರು.<br /> <br /> ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಲಾವಿದರಿಗೆ ನೀಡುವ ಗೌರವ ಧನವನ್ನು ನೇರವಾಗಿ ಆರ್ಟಿಜಿಎಸ್ ವಿಧಾನದ ಮೂಲಕ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ಉದ್ದೇಶಿಸಲಾಗಿದ್ದು, ಸರ್ಕಾರದ ಒಪ್ಪಿಗೆಗೆ ಕಾಯಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ‘ಪ್ರತಿದಿನದ ಕಡತಗಳನ್ನು ಆಯಾದಿನ ಆನ್ಲೈನ್ಗೆ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ಜತೆ ಚರ್ಚಿಸಲಾಗಿದೆ. ಇದರಿಂದ ಅರ್ಜಿದಾರರು ಕಚೇರಿಗೆ ಬರುವ ತೊಂದರೆ ತೆಗೆದುಕೊಳ್ಳದೆ ಮನೆಯಲ್ಲಿ ಕುಳಿತೇ ತಮ್ಮ ಅರ್ಜಿ ಕುರಿತ ಆಯಾ ಕ್ಷಣದ ಮಾಹಿತಿ ಪಡೆಯಬಹುದಾಗಿದೆ’ ಎಂದು ವಿವರಿಸಿದರು.<br /> <br /> ‘ಹಂತ–ಹಂತವಾಗಿ ಕಾಗದರಹಿತ ಆಡಳಿತ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಇಲಾಖೆ ಚಟುವಟಿಕೆಗಳಿಗೆ ಪಾರದರ್ಶಕ ಸ್ಪರ್ಶವನ್ನು ನೀಡುವ ಮತ್ತೊಂದು ಯತ್ನವಾಗಿ ಕಚೇರಿಯ ಎಲ್ಲ ವಿಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.<br /> <br /> ‘ಒಳ್ಳೆಯ ಕಾರ್ಯಕ್ರಮಗಳನ್ನು ನೀಡುವ ಅರ್ಹ ತಂಡಗಳಿಗೆ ಮಾತ್ರ ಧನ ಸಹಾಯ ನೀಡಲು ನಿರ್ಧರಿಸಲಾಗಿದೆ. ದೂರುಗಳಿಗೆ ಆಸ್ಪದ ಇಲ್ಲದಂತೆ ಪಾರದರ್ಶಕ ನೆಲೆಯಲ್ಲಿ ತೀರ್ಮಾನ ಕೈಗೊಳ್ಳುವ ಮೂಲಕ ತಳಮಟ್ಟದಿಂದ ಇಲಾಖೆ ಚಟುವಟಿಕೆಗಳನ್ನು ಗಟ್ಟಿಗೊಳಿಸಲಾಗುತ್ತದೆ’ ಎಂದು ಹೇಳಿದರು.<br /> <br /> <strong>ಮಾತುಕತೆಗೆ ಹೊಸರೂಪ</strong><br /> ‘ಮನೆಯಂಗಳದ ಮಾತುಕತೆ’ ಹಲವು ವರ್ಷಗಳಿಂದ ನಡೆಯುತ್ತಿದ್ದು, ಕಾರ್ಯಕ್ರಮದ ಏಕತಾನತೆಯಿಂದ ಜನರಲ್ಲಿ ಆಸಕ್ತಿ ಕಡಿಮೆಯಾದಂತಿದೆ. ಹೀಗಾಗಿ ಅದಕ್ಕೆ ಹೊಸ ಸ್ವರೂಪ ನೀಡಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ತರಬೇಕಾದ ಬದಲಾವಣೆಗಳ ಬಗೆಗೆ ಸಾಹಿತಿಗಳ ಜತೆ ಚರ್ಚೆ ನಡೆಸಲಾಗುತ್ತದೆ’ ಎಂದು ತಿಳಿಸಿದರು.<br /> <br /> ‘ಅಕಾಡೆಮಿಗಳಿಗೆ ಹೊಸಬರ ನೇಮಕವಾಗಿದ್ದು, ಅಕಾಡೆಮಿ ಸದಸ್ಯರು, ಸಾಹಿತಿಗಳು, ಕಲಾವಿದರ ಜತೆ ಕುಳಿತು ಚರ್ಚೆ ನಡೆಸಿ, ಅಕಾಡೆಮಿಗಳು ಹಮ್ಮಿಕೊಳ್ಳಬೇಕಾದ ಮೌಲಿಕ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರೂಪು–ರೇಷೆ ಸಿದ್ಧಪಡಿಸಲಾಗುವುದು’ ಎಂದು ಹೇಳಿದರು.<br /> <br /> ‘ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ಸಾಂಸ್ಕೃತಿಕ ನೀತಿಗಳಿಗೆ ಸಂಬಂಧಿಸಿದಂತೆ ಕರಡು ವರದಿಯನ್ನು ಸಿದ್ಧಪಡಿಸಿದ್ದು, ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಸರ್ಕಾರಕ್ಕೆ ಸಲ್ಲಿಸಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡಲು ಅಗತ್ಯ ಯೋಜನೆಯನ್ನು ರೂಪಿಸಲಾಗಿದೆ’ ಎಂದು ಇಲಾಖೆಯ ನೂತನ ನಿರ್ದೇಶಕ ಕೆ.ಎ. ದಯಾನಂದ ಹೇಳಿದರು.<br /> <br /> ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಲಾವಿದರಿಗೆ ನೀಡುವ ಗೌರವ ಧನವನ್ನು ನೇರವಾಗಿ ಆರ್ಟಿಜಿಎಸ್ ವಿಧಾನದ ಮೂಲಕ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ಉದ್ದೇಶಿಸಲಾಗಿದ್ದು, ಸರ್ಕಾರದ ಒಪ್ಪಿಗೆಗೆ ಕಾಯಲಾಗುತ್ತಿದೆ’ ಎಂದು ತಿಳಿಸಿದರು.<br /> <br /> ‘ಪ್ರತಿದಿನದ ಕಡತಗಳನ್ನು ಆಯಾದಿನ ಆನ್ಲೈನ್ಗೆ ಅಪ್ಲೋಡ್ ಮಾಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ಜತೆ ಚರ್ಚಿಸಲಾಗಿದೆ. ಇದರಿಂದ ಅರ್ಜಿದಾರರು ಕಚೇರಿಗೆ ಬರುವ ತೊಂದರೆ ತೆಗೆದುಕೊಳ್ಳದೆ ಮನೆಯಲ್ಲಿ ಕುಳಿತೇ ತಮ್ಮ ಅರ್ಜಿ ಕುರಿತ ಆಯಾ ಕ್ಷಣದ ಮಾಹಿತಿ ಪಡೆಯಬಹುದಾಗಿದೆ’ ಎಂದು ವಿವರಿಸಿದರು.<br /> <br /> ‘ಹಂತ–ಹಂತವಾಗಿ ಕಾಗದರಹಿತ ಆಡಳಿತ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಇಲಾಖೆ ಚಟುವಟಿಕೆಗಳಿಗೆ ಪಾರದರ್ಶಕ ಸ್ಪರ್ಶವನ್ನು ನೀಡುವ ಮತ್ತೊಂದು ಯತ್ನವಾಗಿ ಕಚೇರಿಯ ಎಲ್ಲ ವಿಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.<br /> <br /> ‘ಒಳ್ಳೆಯ ಕಾರ್ಯಕ್ರಮಗಳನ್ನು ನೀಡುವ ಅರ್ಹ ತಂಡಗಳಿಗೆ ಮಾತ್ರ ಧನ ಸಹಾಯ ನೀಡಲು ನಿರ್ಧರಿಸಲಾಗಿದೆ. ದೂರುಗಳಿಗೆ ಆಸ್ಪದ ಇಲ್ಲದಂತೆ ಪಾರದರ್ಶಕ ನೆಲೆಯಲ್ಲಿ ತೀರ್ಮಾನ ಕೈಗೊಳ್ಳುವ ಮೂಲಕ ತಳಮಟ್ಟದಿಂದ ಇಲಾಖೆ ಚಟುವಟಿಕೆಗಳನ್ನು ಗಟ್ಟಿಗೊಳಿಸಲಾಗುತ್ತದೆ’ ಎಂದು ಹೇಳಿದರು.<br /> <br /> <strong>ಮಾತುಕತೆಗೆ ಹೊಸರೂಪ</strong><br /> ‘ಮನೆಯಂಗಳದ ಮಾತುಕತೆ’ ಹಲವು ವರ್ಷಗಳಿಂದ ನಡೆಯುತ್ತಿದ್ದು, ಕಾರ್ಯಕ್ರಮದ ಏಕತಾನತೆಯಿಂದ ಜನರಲ್ಲಿ ಆಸಕ್ತಿ ಕಡಿಮೆಯಾದಂತಿದೆ. ಹೀಗಾಗಿ ಅದಕ್ಕೆ ಹೊಸ ಸ್ವರೂಪ ನೀಡಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ತರಬೇಕಾದ ಬದಲಾವಣೆಗಳ ಬಗೆಗೆ ಸಾಹಿತಿಗಳ ಜತೆ ಚರ್ಚೆ ನಡೆಸಲಾಗುತ್ತದೆ’ ಎಂದು ತಿಳಿಸಿದರು.<br /> <br /> ‘ಅಕಾಡೆಮಿಗಳಿಗೆ ಹೊಸಬರ ನೇಮಕವಾಗಿದ್ದು, ಅಕಾಡೆಮಿ ಸದಸ್ಯರು, ಸಾಹಿತಿಗಳು, ಕಲಾವಿದರ ಜತೆ ಕುಳಿತು ಚರ್ಚೆ ನಡೆಸಿ, ಅಕಾಡೆಮಿಗಳು ಹಮ್ಮಿಕೊಳ್ಳಬೇಕಾದ ಮೌಲಿಕ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರೂಪು–ರೇಷೆ ಸಿದ್ಧಪಡಿಸಲಾಗುವುದು’ ಎಂದು ಹೇಳಿದರು.<br /> <br /> ‘ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ಸಾಂಸ್ಕೃತಿಕ ನೀತಿಗಳಿಗೆ ಸಂಬಂಧಿಸಿದಂತೆ ಕರಡು ವರದಿಯನ್ನು ಸಿದ್ಧಪಡಿಸಿದ್ದು, ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕ ಸರ್ಕಾರಕ್ಕೆ ಸಲ್ಲಿಸಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>