ಕಾರವಾರ: ‘ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೆ ಜಾರಿ ಆಗಲು ಬಿಡುವುದಿಲ್ಲ. ಈ ಬಗ್ಗೆ ಜಿಲ್ಲೆಯ ಜನರು ಭಯ ಪಡಬೇಕಾಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬಿಜೆಪಿಯ ‘ಜನಸಂಪರ್ಕ ಅಭಿಯಾನ’ ಸಭೆಯಲ್ಲಿ ಅವರು ಮಾತನಾಡಿದರು. ‘ರಾಜ್ಯ ಸರ್ಕಾರ ಸಕಾಲಕ್ಕೆ ಮಾಹಿತಿ ಸಂಗ್ರಹಿಸಿ ಕಳುಹಿಸಿದ್ದರೆ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ವರದಿ ಜಾರಿಯಾಗದಂತೆ ಬಿಜೆಪಿ ಸಂಸದರಾದ ನಾವು ಕೇಂದ್ರದ ಮೇಲೆ ಒತ್ತಡ ಹಾಕಲಿದ್ದೇವೆ’ ಎಂದು ಹೇಳಿದರು.