ಬ್ರಾಹ್ಮಣ, ಲಿಂಗಾಯತ, ಕುರುಬ, ವಾಲ್ಮೀಕಿ, ಒಕ್ಕಲಿಗ, ಎಡಗೈ, ಬಲಗೈ... ಹೀಗೆ ಒಂದೊಂದು ಜಾತಿಯವರಿಗೂ ಕಾಂಗ್ರೆಸ್ ಪದಾಧಿಕಾರಿಗಳ ಸ್ಥಾನ ನೀಡಲಾಗಿದೆ. ಆದರೆ, ಅಲ್ಪಸಂಖ್ಯಾತರಿಗೆ ಯಾವ ಸ್ಥಾನವನ್ನೂ ನೀಡಿಲ್ಲ. ಆ ಸಮುದಾಯವನ್ನು ಮರೆತಿರುವ ಕಾಂಗ್ರೆಸ್, ಸಮಾಜವನ್ನು ಛಿದ್ರ ಮಾಡುತ್ತಿದೆ. ಆಡಳಿತದಲ್ಲಿರುವ ಪಕ್ಷಕ್ಕೆ ಇಂತಹ ದುಃಸ್ಥಿತಿ ಬರಬಾರದಿತ್ತು ಎಂದು ಟೀಕಿಸಿದರು.