ಅದರಂತೆ ರಾಜ್ಯ ಸರ್ಕಾರವು ಆದಾಯ ತೆರಿಗೆ ಇಲಾಖೆಗೆ ಇಂದು ಮಾಹಿತಿ ಕಳುಹಿಸಬೇಕಿತ್ತು. ಆದರೆ, ಲೋಕೋಪಯೋಗಿ, ಕಂದಾಯ, ಇಂಧನ, ಜಲ ಸಂಪನ್ಮೂಲ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳು ಗುತ್ತಿಗೆದಾರರಿಗೆ ಬಿಡುಗಡೆ ಮಾಡಿರುವ ಹಣ ಕುರಿತು ಇನ್ನೂ ಮಾಹಿತಿ ಸಂಗ್ರಹಿಸುತ್ತಿವೆ ಎಂದು ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.