ಟ್ರಸ್ಟ್ ವತಿಯಿಂದ ನಗರದ ವಿವೇಕಾನಂದ ರಂಗಮಂದಿರದಲ್ಲಿ ಗುರುವಾರ ನಡೆದ ಕೆ.ಎಸ್.ನ ಕಾವ್ಯೋತ್ಸವದಲ್ಲಿ ಮಾತನಾಡಿದರು. ‘350 ಎಕರೆ ವಿಸ್ತೀರ್ಣ ಹೊಂದಿರುವ ಸುಂದರ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು. ಜೊತೆಗೆ ನರಸಿಂಹಸ್ವಾಮಿ ಅವರು ಜೀವಿಸಿದ ಮನೆಗೆ ಸಂಗ್ರಹಾಲಯದ ರೂಪ ನೀಡಲಾಗುವುದು. ಗ್ರಂಥಾಲಯ, ರಂಗಮಂದಿರ ನಿರ್ಮಾಣ ಮಾಡುವ ಮೂಲಕ ವೈವಿಧ್ಯಮಯ ಕನ್ನಡ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು’ ಎಂದು ಹೇಳಿದರು.