<p><strong>ಮಂಗಳೂರು: </strong>ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಆಧುನೀಕರಣಗೊಳಿಸುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಹೇಗೆ ಮುಂದುವರಿಯಬೇಕೆಂದು ಸಲಹೆ ಕೋರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ.</p>.<p>ಸ್ಮಾರ್ಟ್ ಸಿಟಿ ಮಾರ್ಗಸೂಚಿಗಳ ಅಡಿಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನ ಕೂಡ ಈ ಪ್ರಸ್ತಾವಕ್ಕೆ ಮುಖ್ಯ ಕಾರಣ. ಮಂಗಳೂರು ಬಹುಸಂಸ್ಕೃತಿಯ ಜನರು ವಾಸಿಸುತ್ತಿರುವ ನಗರ. ಇಲ್ಲಿನ ಜನರಿಗೆ ಶುಚಿಯಾದ ಮಾಂಸ ಲಭ್ಯವಾಗಬೇಕಿದೆ. ಕಸಾಯಿಖಾನೆಯಿಂದ ನಗರದ ನದಿ ಮತ್ತು ಸಮುದ್ರ ಮಲಿನವಾಗದಂತೆ ತಡೆಯುವ ಉದ್ದೇಶವೂ ಈ ಪ್ರಸ್ತಾವದ ಹಿಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಈ ಪ್ರಸ್ತಾವಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ವಿಶೇಷ ವಾಹಕ ಒಪ್ಪಿಗೆ ನೀಡಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದ ಉನ್ನತಮಟ್ಟದ ಸಮಿತಿಯೂ ಅನುಮೋದನೆ ನೀಡಿದೆ. ಆ ಬಳಿಕ ಒಂದು ಗುಂಪಿನ ಜನರು ಮತ್ತು ಕೆಲವು ಸಂಘಟನೆಗಳಿಂದ ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ. ಈಗಾಗಲೇ ಅನುಮೋದನೆಗೊಂಡಿರುವ ಕಾಮಗಾರಿಯನ್ನು ವಿರೋಧಿಸುತ್ತಿರುವ ಈ ಗುಂಪು, ಸ್ಮಾರ್ಟ್ ಸಿಟಿ ಯೋಜನೆಯಡಿ ಗೋಶಾಲೆ ತೆರೆಯುವಂತೆ ಒತ್ತಾಯಿಸುತ್ತಿದೆ. ಇದರಿಂದ ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ’ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<p>‘ರಾಜ್ಯದ ನಗರಾಭಿವೃದ್ಧಿ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವ ನಾನು ಈ ವಿಚಾರದಲ್ಲಿ ಕೆಲವು ಸಂಘಟನೆಗಳ ವಿರೋಧದಿಂದ ಮುಜುಗರ ಎದುರಿಸುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಕ್ಕೂ ಅಡಚಣೆ ಉಂಟಾಗಿದೆ’ ಎಂದಿದ್ದಾರೆ.</p>.<p>‘ಸ್ಮಾರ್ಟ್ ಸಿಟಿ ಯೋಜನೆಯಡಿ ಗೋಶಾಲೆ ತೆರೆಯುವಂತೆ ಕೆಲವು ಚುನಾಯಿತ ಪ್ರತಿನಿಧಿಗಳೂ ಒತ್ತಾಯಿಸುತ್ತಿದ್ದಾರೆ. ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ಅತ್ಯಮೂಲ್ಯವಾದುದು. ನಿಮ್ಮ ಸಲಹೆಯಂತೆ ಮುನ್ನಡೆಯಲು ನಾನು ಸಿದ್ಧ. ಈ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಆದಷ್ಟು ಬೇಗನೆ ನಿಮ್ಮ ಸಲಹೆ ಮತ್ತು ಮಾರ್ಗದರ್ಶನ ನೀಡಿದರೆ ಈಗ ಎದುರಾಗಿರುವ ಗೊಂದಲಕ್ಕೆ ತೆರೆ ಎಳೆಯಬಹುದು’ ಎಂದು ಖಾದರ್ ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.</p>.<p>ಆ ಬಳಿಕ ಕೆಲವು ಚುನಾಯಿತ ಪ್ರತಿನಿಧಿಗಳೇ ವಿರೋಧ ಮಾಡುತ್ತಿದ್ದಾರೆ. ಈ ಕಾರಣದಿಂದ ಹೇಗೆ ಮುಂದುವರಿಯಬೇಕು ಎಂಬುದಾಗಿ ಸಲಹೆ ನೀಡುವಂತೆ ಪ್ರಧಾನಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಕೋರಲಾಗಿದೆ. ಅವರ ಸಲಹೆಯಂತೆ ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದರು.</p>.<p>ಪತ್ರ ಬರೆದಿರುವ ವಿಚಾರವನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಸಚಿವರು, ಕಸಾಯಿಖಾನೆ ಆಧುನೀಕರಣ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಅದನ್ನು ವಿರೋಧಿಸುವವರು ಯಾವುದೇ ಆರೋಪ ಮಾಡಿದರೆ ಯಾರೂ ಪ್ರತಿಕ್ರಿಯಿಸಬಾರದು. ಈ ವಿಚಾರವನ್ನು ಮುಂದಿಟ್ಟುಕೊಂಡು ಜಿಲ್ಲೆಯ ಜನರ ನಡುವೆ ದ್ವೇಷ ಬಿತ್ತುವುದನ್ನು ತಾವು ಬಯಸುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಆಧುನೀಕರಣಗೊಳಿಸುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಹೇಗೆ ಮುಂದುವರಿಯಬೇಕೆಂದು ಸಲಹೆ ಕೋರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಪತ್ರ ಬರೆದಿದ್ದಾರೆ.</p>.<p>ಸ್ಮಾರ್ಟ್ ಸಿಟಿ ಮಾರ್ಗಸೂಚಿಗಳ ಅಡಿಯಲ್ಲಿ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನ ಕೂಡ ಈ ಪ್ರಸ್ತಾವಕ್ಕೆ ಮುಖ್ಯ ಕಾರಣ. ಮಂಗಳೂರು ಬಹುಸಂಸ್ಕೃತಿಯ ಜನರು ವಾಸಿಸುತ್ತಿರುವ ನಗರ. ಇಲ್ಲಿನ ಜನರಿಗೆ ಶುಚಿಯಾದ ಮಾಂಸ ಲಭ್ಯವಾಗಬೇಕಿದೆ. ಕಸಾಯಿಖಾನೆಯಿಂದ ನಗರದ ನದಿ ಮತ್ತು ಸಮುದ್ರ ಮಲಿನವಾಗದಂತೆ ತಡೆಯುವ ಉದ್ದೇಶವೂ ಈ ಪ್ರಸ್ತಾವದ ಹಿಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಈ ಪ್ರಸ್ತಾವಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ವಿಶೇಷ ವಾಹಕ ಒಪ್ಪಿಗೆ ನೀಡಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದ ಉನ್ನತಮಟ್ಟದ ಸಮಿತಿಯೂ ಅನುಮೋದನೆ ನೀಡಿದೆ. ಆ ಬಳಿಕ ಒಂದು ಗುಂಪಿನ ಜನರು ಮತ್ತು ಕೆಲವು ಸಂಘಟನೆಗಳಿಂದ ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ. ಈಗಾಗಲೇ ಅನುಮೋದನೆಗೊಂಡಿರುವ ಕಾಮಗಾರಿಯನ್ನು ವಿರೋಧಿಸುತ್ತಿರುವ ಈ ಗುಂಪು, ಸ್ಮಾರ್ಟ್ ಸಿಟಿ ಯೋಜನೆಯಡಿ ಗೋಶಾಲೆ ತೆರೆಯುವಂತೆ ಒತ್ತಾಯಿಸುತ್ತಿದೆ. ಇದರಿಂದ ಬಿಕ್ಕಟ್ಟು ಸೃಷ್ಟಿಯಾಗುತ್ತಿದೆ’ ಎಂದು ಪತ್ರದಲ್ಲಿ ಹೇಳಲಾಗಿದೆ.</p>.<p>‘ರಾಜ್ಯದ ನಗರಾಭಿವೃದ್ಧಿ ಸಚಿವ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವ ನಾನು ಈ ವಿಚಾರದಲ್ಲಿ ಕೆಲವು ಸಂಘಟನೆಗಳ ವಿರೋಧದಿಂದ ಮುಜುಗರ ಎದುರಿಸುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಕ್ಕೂ ಅಡಚಣೆ ಉಂಟಾಗಿದೆ’ ಎಂದಿದ್ದಾರೆ.</p>.<p>‘ಸ್ಮಾರ್ಟ್ ಸಿಟಿ ಯೋಜನೆಯಡಿ ಗೋಶಾಲೆ ತೆರೆಯುವಂತೆ ಕೆಲವು ಚುನಾಯಿತ ಪ್ರತಿನಿಧಿಗಳೂ ಒತ್ತಾಯಿಸುತ್ತಿದ್ದಾರೆ. ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ಅತ್ಯಮೂಲ್ಯವಾದುದು. ನಿಮ್ಮ ಸಲಹೆಯಂತೆ ಮುನ್ನಡೆಯಲು ನಾನು ಸಿದ್ಧ. ಈ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಆದಷ್ಟು ಬೇಗನೆ ನಿಮ್ಮ ಸಲಹೆ ಮತ್ತು ಮಾರ್ಗದರ್ಶನ ನೀಡಿದರೆ ಈಗ ಎದುರಾಗಿರುವ ಗೊಂದಲಕ್ಕೆ ತೆರೆ ಎಳೆಯಬಹುದು’ ಎಂದು ಖಾದರ್ ಅವರು ಪ್ರಧಾನಿಗೆ ಮನವಿ ಮಾಡಿದ್ದಾರೆ.</p>.<p>ಆ ಬಳಿಕ ಕೆಲವು ಚುನಾಯಿತ ಪ್ರತಿನಿಧಿಗಳೇ ವಿರೋಧ ಮಾಡುತ್ತಿದ್ದಾರೆ. ಈ ಕಾರಣದಿಂದ ಹೇಗೆ ಮುಂದುವರಿಯಬೇಕು ಎಂಬುದಾಗಿ ಸಲಹೆ ನೀಡುವಂತೆ ಪ್ರಧಾನಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಕೋರಲಾಗಿದೆ. ಅವರ ಸಲಹೆಯಂತೆ ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿದರು.</p>.<p>ಪತ್ರ ಬರೆದಿರುವ ವಿಚಾರವನ್ನು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಸಚಿವರು, ಕಸಾಯಿಖಾನೆ ಆಧುನೀಕರಣ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಅದನ್ನು ವಿರೋಧಿಸುವವರು ಯಾವುದೇ ಆರೋಪ ಮಾಡಿದರೆ ಯಾರೂ ಪ್ರತಿಕ್ರಿಯಿಸಬಾರದು. ಈ ವಿಚಾರವನ್ನು ಮುಂದಿಟ್ಟುಕೊಂಡು ಜಿಲ್ಲೆಯ ಜನರ ನಡುವೆ ದ್ವೇಷ ಬಿತ್ತುವುದನ್ನು ತಾವು ಬಯಸುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>