ಇದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ತಮಿಳುನಾಡಿಗೆ ನೀರು ಬಿಡುವ ಸಮಸ್ಯೆ ಬಗೆಹರಿದಿದೆ. ರೈತರಿಗೆ ಸಮೃದ್ಧ ಬೆಳೆ ಬಂದು ಸುಖವಾಗಿರಲಿ. ಸಾರ್ವಜನಿಕರು ಸಂತೋಷದಿಂದ ಇರಲಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದರು.
ಈ ಸಂದರ್ಭದಲ್ಲಿ ನೀರಾವರಿ ಸಚಿವ ಎಂ.ಬಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್, ಸಚಿವರಾದ ವಿ. ಶ್ರೀನಿವಾಸ್ ಪ್ರಸಾದ್, ಎಚ್.ಎಸ್. ಮಹದೇವ ಪ್ರಸಾದ್, ಎಚ್.ಸಿ. ಮಹದೇವಪ್ಪ, ಶಾಸಕರಾದ ಎಂ.ಕೆ. ಸೋಮಶೇಖರ್, ಕೆ.ಎನ್. ಪುಟ್ಟಣ್ಣಯ್ಯ ಮೊದಲಾದವರು ಹಾಜರಿದ್ದರು.
ಚುನಾವಣಾ ನೀತಿ ಉಲ್ಲಂಘನೆ?: ಮಧ್ಯಾಹ್ನ 3.45 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೃಷ್ಣರಾಜಸಾಗರದ ಎಂಜಿನಿಯರಿಂಗ್ ಸಿಬ್ಬಂದಿ ಕಾಲೇಜಿನ ಹೆಲಿಪ್ಯಾಡ್ಗೆ ಆಗಮಿಸಿದ ಮುಖ್ಯಮಂತ್ರಿ ಅವರು, ಬಾಗಿನ ಅರ್ಪಿಸಿ ಮತ್ತೆ ಬೆಂಗಳೂರಿನತ್ತ ಪ್ರಯಾಣಿಸಿದ್ದು 4.30 ಗಂಟೆಗೆ.