<p>ಧಾರವಾಡ: ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಪೀಠ ಸ್ಥಾಪನೆಗೆ ಒತ್ತಾಯಿಸಿ ಏಳು ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಭರವಸೆ ಹಿನ್ನೆಲೆಯಲ್ಲಿ ಶನಿವಾರ ಅಂತ್ಯವಾಯಿತು.<br /> <br /> ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಜಯಚಂದ್ರ, ‘ಕೆಎಟಿಯಲ್ಲಿ ಸುಮಾರು 25,000 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಸುಮಾರು ಐದು ಸಾವಿರ ಪ್ರಕರಣಗಳು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿವೆ. ಸದ್ಯ ಎರಡು ಪೀಠಗಳ ಅವಶ್ಯಕತೆ ಇದ್ದು, ಒಂದನ್ನು ಧಾರವಾಡದಲ್ಲಿ ಸ್ಥಾಪಿಸುವುದಾಗಿ ಭರವಸೆ ನೀಡಿದರು.<br /> <br /> ಈ ಕುರಿತು ತಾವು ವಿಧಾನಸಭೆಯಲ್ಲಿ ಉತ್ತರ ನೀಡಿದ್ದು, ನಾಳೆ (ಭಾನುವಾರ) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು, ಅನುಷ್ಠಾನಗೊಳಿಸಲಾಗುವುದು. ಯಾವುದೇ ಸಂದೇಹ ಬೇಡ. ಕೆಎಟಿ ಪೀಠ ಸ್ಥಾಪನೆ ಈ ಭಾಗದ ನ್ಯಾಯಯುತ ಬೇಡಿಕೆ. ಜೊತೆಗೆ ಈ ಭಾಗಕ್ಕೆ ನ್ಯಾಯಯುತವಾಗಿ ಏನು ಬರಬೇಕೋ ಅದನ್ನು ದೊರಕಿಸಿಕೊಡಲು ಸರ್ಕಾರ ಬದ್ಧವಾಗಿದೆ ಎಂದರು.<br /> <br /> ಸಚಿವರು ಹಿರೇಮಠ ಅವರಿಗೆ ಎಳನೀರು ಕುಡಿಸುವ ಮೂಲಕ ಸತ್ಯಾಗ್ರಹ ಅಂತ್ಯಗೊಳಿಸಿದರು. ನಂತರ ಪ್ರತಿಕ್ರಿಯಿಸಿದ ಹಿರೇಮಠ, ‘ಕಾನೂನು ಸಚಿವರು ಪೀಠ ಸ್ಥಾಪನೆ ಭರವಸೆ ನೀಡಿದ್ದಾರೆ. ಆ ಭರವಸೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದೇವೆ. 3 ತಿಂಗಳೊಳಗೆ ಭರವಸೆ ಅನುಷ್ಠಾನಗೊಳ್ಳದಿದ್ದರೆ ಮತ್ತೆ ಸತ್ಯಾಗ್ರಹ ಪುನರಾರಂಭಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಪೀಠ ಸ್ಥಾಪನೆಗೆ ಒತ್ತಾಯಿಸಿ ಏಳು ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಭರವಸೆ ಹಿನ್ನೆಲೆಯಲ್ಲಿ ಶನಿವಾರ ಅಂತ್ಯವಾಯಿತು.<br /> <br /> ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಜಯಚಂದ್ರ, ‘ಕೆಎಟಿಯಲ್ಲಿ ಸುಮಾರು 25,000 ಪ್ರಕರಣಗಳು ಬಾಕಿ ಇವೆ. ಈ ಪೈಕಿ ಸುಮಾರು ಐದು ಸಾವಿರ ಪ್ರಕರಣಗಳು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿವೆ. ಸದ್ಯ ಎರಡು ಪೀಠಗಳ ಅವಶ್ಯಕತೆ ಇದ್ದು, ಒಂದನ್ನು ಧಾರವಾಡದಲ್ಲಿ ಸ್ಥಾಪಿಸುವುದಾಗಿ ಭರವಸೆ ನೀಡಿದರು.<br /> <br /> ಈ ಕುರಿತು ತಾವು ವಿಧಾನಸಭೆಯಲ್ಲಿ ಉತ್ತರ ನೀಡಿದ್ದು, ನಾಳೆ (ಭಾನುವಾರ) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು, ಅನುಷ್ಠಾನಗೊಳಿಸಲಾಗುವುದು. ಯಾವುದೇ ಸಂದೇಹ ಬೇಡ. ಕೆಎಟಿ ಪೀಠ ಸ್ಥಾಪನೆ ಈ ಭಾಗದ ನ್ಯಾಯಯುತ ಬೇಡಿಕೆ. ಜೊತೆಗೆ ಈ ಭಾಗಕ್ಕೆ ನ್ಯಾಯಯುತವಾಗಿ ಏನು ಬರಬೇಕೋ ಅದನ್ನು ದೊರಕಿಸಿಕೊಡಲು ಸರ್ಕಾರ ಬದ್ಧವಾಗಿದೆ ಎಂದರು.<br /> <br /> ಸಚಿವರು ಹಿರೇಮಠ ಅವರಿಗೆ ಎಳನೀರು ಕುಡಿಸುವ ಮೂಲಕ ಸತ್ಯಾಗ್ರಹ ಅಂತ್ಯಗೊಳಿಸಿದರು. ನಂತರ ಪ್ರತಿಕ್ರಿಯಿಸಿದ ಹಿರೇಮಠ, ‘ಕಾನೂನು ಸಚಿವರು ಪೀಠ ಸ್ಥಾಪನೆ ಭರವಸೆ ನೀಡಿದ್ದಾರೆ. ಆ ಭರವಸೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸತ್ಯಾಗ್ರಹ ಹಿಂತೆಗೆದುಕೊಂಡಿದ್ದೇವೆ. 3 ತಿಂಗಳೊಳಗೆ ಭರವಸೆ ಅನುಷ್ಠಾನಗೊಳ್ಳದಿದ್ದರೆ ಮತ್ತೆ ಸತ್ಯಾಗ್ರಹ ಪುನರಾರಂಭಿಸುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>