<p><strong>ಬೆಂಗಳೂರು:</strong> `ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳಾದರು. ಅದರಲ್ಲಿ ಕೆಲವರು ಜೈಲಿಗೆ ಹೋದರು, ಮತ್ತೆ ಕೆಲವರು ಕೋರ್ಟ್ಗಳಿಗೆ ಅಲೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ಉರುಳಿಸುವ ಅವಶ್ಯಕತೆ ಇಂದು ಬಂದೊದಗಿದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು.<br /> <br /> ನಗರದ ಭಾರತೀಯ ವಿದ್ಯಾಭವನದಲ್ಲಿ ಈಚೆಗೆ ನಡೆದ `ದಿ ಸ್ಪೈಡರ್ ಆಫ್ ಇಂಡಿಯಾ~ ಕನ್ನಡ ವಾರ ಪತ್ರಿಕೆ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮತನಾಡಿದರು. <br /> <br /> `ರಾಜ್ಯದಲ್ಲಿ ಕೆಟ್ಟ ಜನರು ಅಧಿಕಾರ ನಡೆಸುತ್ತಿದ್ದಾರೆ. ಇಂತಹ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯಾದ್ಯಾಂತ ಬಿಜೆಪಿ ಹಠಾವೋ ಚಳವಳಿಯನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ~ ಎಂದರು.<br /> <br /> `ಬಿಜೆಪಿಯವರು ರಾಜಕೀಯದ ಅನಾಚಾರದಲ್ಲಿ ಬಹು ದೂರ ಸಾಗಿದ್ದಾರೆ. ಹೈಕಮಾಂಡ್ ಕೂಡ ಇಂತಹ ಕೆಟ್ಟ ಸರ್ಕಾರಕ್ಕೆ ಆದ್ಯತೆಯನ್ನು ನೀಡುತ್ತಿದೆ. ಒಬ್ಬ ಮನುಷ್ಯನನ್ನು ಉಳಿಸಿಕೊಳ್ಳುವುದಕ್ಕಾಗಿ ಹೈಕಮಾಂಡ್ ಜಾತಿ ರಾಜಕಾರಣದಂತಹ ದುರ್ಮಾರ್ಗವನ್ನು ಅನುಸರಿಸುತ್ತಿದೆ~ ಎಂದರು.<br /> <br /> `ರಾಜ್ಯದಲ್ಲಿ ಭ್ರಷ್ಟಾಚಾರ, ಜಾತಿ ರಾಜಕಾರಣ, ಅರಾಜಕತೆ ತಾಂಡವವಾಡುತ್ತಿದ್ದರೂ, ಎಲ್ಲ ರಾಜಕೀಯ ಪಕ್ಷಗಳು ನಿಷ್ಕ್ರಿಯಗೊಂಡಿವೆ. ಜನರೂ ಕೂಡ ಇಂತಹ ಅನಾಚಾರಗಳನ್ನು ನೋಡಿಕೊಂಡು ಸತ್ತಂತೆ ಬದುಕುತ್ತಿದ್ದಾರೆ~ ಎಂದು ಕಿಡಿಕಾರಿದರು. ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಮಾತನಾಡಿದರು. ಮಾಜಿ ಮೇಯರ್ ಜೆ.ಹುಚ್ಚಪ್ಪ, ಪತ್ರಕರ್ತ ಎಚ್.ಎಚ್.ಧನಂಜಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯದಲ್ಲಿ ಮೂರು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳಾದರು. ಅದರಲ್ಲಿ ಕೆಲವರು ಜೈಲಿಗೆ ಹೋದರು, ಮತ್ತೆ ಕೆಲವರು ಕೋರ್ಟ್ಗಳಿಗೆ ಅಲೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ಉರುಳಿಸುವ ಅವಶ್ಯಕತೆ ಇಂದು ಬಂದೊದಗಿದೆ~ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು.<br /> <br /> ನಗರದ ಭಾರತೀಯ ವಿದ್ಯಾಭವನದಲ್ಲಿ ಈಚೆಗೆ ನಡೆದ `ದಿ ಸ್ಪೈಡರ್ ಆಫ್ ಇಂಡಿಯಾ~ ಕನ್ನಡ ವಾರ ಪತ್ರಿಕೆ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮತನಾಡಿದರು. <br /> <br /> `ರಾಜ್ಯದಲ್ಲಿ ಕೆಟ್ಟ ಜನರು ಅಧಿಕಾರ ನಡೆಸುತ್ತಿದ್ದಾರೆ. ಇಂತಹ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯಾದ್ಯಾಂತ ಬಿಜೆಪಿ ಹಠಾವೋ ಚಳವಳಿಯನ್ನು ಹಮ್ಮಿಕೊಳ್ಳುವ ಅವಶ್ಯಕತೆಯಿದೆ~ ಎಂದರು.<br /> <br /> `ಬಿಜೆಪಿಯವರು ರಾಜಕೀಯದ ಅನಾಚಾರದಲ್ಲಿ ಬಹು ದೂರ ಸಾಗಿದ್ದಾರೆ. ಹೈಕಮಾಂಡ್ ಕೂಡ ಇಂತಹ ಕೆಟ್ಟ ಸರ್ಕಾರಕ್ಕೆ ಆದ್ಯತೆಯನ್ನು ನೀಡುತ್ತಿದೆ. ಒಬ್ಬ ಮನುಷ್ಯನನ್ನು ಉಳಿಸಿಕೊಳ್ಳುವುದಕ್ಕಾಗಿ ಹೈಕಮಾಂಡ್ ಜಾತಿ ರಾಜಕಾರಣದಂತಹ ದುರ್ಮಾರ್ಗವನ್ನು ಅನುಸರಿಸುತ್ತಿದೆ~ ಎಂದರು.<br /> <br /> `ರಾಜ್ಯದಲ್ಲಿ ಭ್ರಷ್ಟಾಚಾರ, ಜಾತಿ ರಾಜಕಾರಣ, ಅರಾಜಕತೆ ತಾಂಡವವಾಡುತ್ತಿದ್ದರೂ, ಎಲ್ಲ ರಾಜಕೀಯ ಪಕ್ಷಗಳು ನಿಷ್ಕ್ರಿಯಗೊಂಡಿವೆ. ಜನರೂ ಕೂಡ ಇಂತಹ ಅನಾಚಾರಗಳನ್ನು ನೋಡಿಕೊಂಡು ಸತ್ತಂತೆ ಬದುಕುತ್ತಿದ್ದಾರೆ~ ಎಂದು ಕಿಡಿಕಾರಿದರು. ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಮಾತನಾಡಿದರು. ಮಾಜಿ ಮೇಯರ್ ಜೆ.ಹುಚ್ಚಪ್ಪ, ಪತ್ರಕರ್ತ ಎಚ್.ಎಚ್.ಧನಂಜಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>