<p>ಬೆಂಗಳೂರು: ಗೃಹ ಬಳಕೆಯ ವಿದ್ಯುತ್ತನ್ನು ಉಚಿತವಾಗಿ ಬಳಸುವ ಆಸೆಯಲ್ಲಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ನೌಕರರಿಗೆ ಹೈಕೋರ್ಟ್ ಸೋಮವಾರ `ಶಾಕ್~ ನೀಡಿದೆ.<br /> <br /> 1997ರ ನಂತರ ಕೆಪಿಟಿಸಿಎಲ್ಗೆ ನೇಮಕಗೊಂಡಿರುವ ಸಿಬ್ಬಂದಿ ಉಚಿತವಾಗಿ ವಿದ್ಯುತ್ ಬಳಸುವುದಕ್ಕೆ ನಿರ್ಬಂಧ ಹೇರಿ ನಿಗಮದ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ನ್ಯಾಯಮೂರ್ತಿಗಳಾದ ಕೆ.ಶ್ರೀಧರರಾವ್ ಹಾಗೂ ಬಿ.ಎಸ್.ಇಂದ್ರಕಲಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಊರ್ಜಿತಗೊಳಿಸಿದೆ.<br /> <br /> 1984ರ ಮೇ 8ರಿಂದ ಕೆಪಿಟಿಸಿಎಲ್ನ ಎಲ್ಲ ಸಿಬ್ಬಂದಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ವಿದ್ಯುತ್ ಸರಬರಾಜು ಕಾಯ್ದೆಗೆ 1997ರ ಏ.17ರಂದು ತಿದ್ದುಪಡಿ ತರಲಾಯಿತು. ಈ ಅವಧಿಗಿಂತ ಮುಂಚಿತವಾಗಿ ಸೇರ್ಪಡೆಗೊಂಡಿರುವ ನೌಕರರಿಗೆ ಮಾತ್ರ ಉಚಿತವಾಗಿ ಗೃಹ ಬಳಕೆಯ ವಿದ್ಯುತ್ ಬಳಸಲು ಅನುಮತಿ ನೀಡಲಾಯಿತು. ಆದರೆ ಈ ಅವಧಿಯ ನಂತರ ನೇಮಕಗೊಂಡಿರುವ ನೌಕರರಿಗೆ ಈ ಅಧಿಕಾರ ಇಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು. ಈ ರೀತಿ ತಿದ್ದುಪಡಿ ಮಾಡುವ ಅಧಿಕಾರ ಕೆಪಿಟಿಸಿಎಲ್ಗೆ ಇಲ್ಲ ಎನ್ನುವುದು ಅರ್ಜಿದಾರರ ವಾದವಾಗಿತ್ತು. <br /> <br /> ಆದರೆ ಈ ವಾದವನ್ನು ನ್ಯಾಯಮೂರ್ತಿಗಳು ತಳ್ಳಿ ಹಾಕಿದ್ದಾರೆ. `ವಿದ್ಯುತ್ ಸರಬರಾಜು ಕಾಯ್ದೆಯ 79(ಸಿ) ಅಡಿ ತಿದ್ದುಪಡಿ ಮಾಡುವ ಅಧಿಕಾರ ಕೆಪಿಟಿಸಿಎಲ್ಗೆ ಇದೆ. ಕೆಲವೊಂದು ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡೇ ನಿಗಮದ ಹಿತದೃಷ್ಟಿಯಿಂದ ಈ ತಿದ್ದುಪಡಿ ಮಾಡಲಾಗಿದೆ.<br /> <br /> 1997ಕ್ಕೂ ಮೊದಲು ನೇಮಕಗೊಂಡ ನೌಕರರಿಗೆ ಸಿಗುತ್ತಿರುವ ಸೌಲಭ್ಯಗಳು ತಮಗೂ ಸಿಗಬೇಕು ಎಂದು ನೌಕರರು ವಾದ ಮಾಡುವುದರಲ್ಲಿ ಅರ್ಥವಿಲ್ಲ. ಆದುದರಿಂದ ನೌಕರರ ನಡುವೆ ಭೇದ ಭಾವ ಎಸಗಲಾಗುತ್ತಿದೆ ಎಂಬ ವಾದದಲ್ಲಿ ಯಾವುದೇ ಹುರುಳು ಇಲ್ಲ~ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.<br /> <br /> <strong>ದ್ವಿಪತ್ನಿತ್ವ ಪ್ರಕರಣ: ಎಚ್ಡಿಕೆ ಸದ್ಯ ನಿರಾಳ</strong><br /> <br /> ದ್ವಿಪತ್ನಿತ್ವದ ಆರೋಪ ಎದುರಿಸುತ್ತಿರುವ ಸಂಸದ ಎಚ್.ಡಿ.ಕುಮಾರಸ್ವಾಮಿ ಸದ್ಯ ನಿರಾಳ.<br /> - ಕಾರಣ, ಹಿಂದು ವಿವಾಹ ಕಾಯ್ದೆಯನ್ನು ಉಲ್ಲಂಘಿಸಿ ಎರಡನೇ ಮದುವೆ ಆಗಿರುವ ಇವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.<br /> <br /> ಶಶಿಧರ ಬೆಳಗುಂಬ ಎನ್ನುವವರು ಸಲ್ಲಿಸಿದ್ದ ಅರ್ಜಿ ಇದಾಗಿದೆ. ಅನಿತಾ ಅವರನ್ನು ವಿವಾಹವಾಗಿರುವಾಗಲೇ ಅವರಿಗೆ ವಿಚ್ಛೇದನ ನೀಡದೆ ಚಿತ್ರನಟಿ ರಾಧಿಕಾ ಅವರನ್ನೂ ವಿವಾಹವಾಗಿರುವುದು ಕಾನೂನು ಉಲ್ಲಂಘನೆ ಎನ್ನುವುದು ಅವರ ಆರೋಪವಾಗಿತ್ತು. <br /> <br /> ಅರ್ಜಿಯಲ್ಲಿ ಕೆಲವೊಂದು ತಾಂತ್ರಿಕ ದೋಷಗಳು ಇದ್ದ ಹಿನ್ನೆಲೆಯಲ್ಲಿ ಅವುಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಈ ಹಿಂದೆ ಹಲವು ಬಾರಿ ಅರ್ಜಿದಾರರಿಗೆ ನಿರ್ದೇಶಿಸಿತ್ತು. ಆದರೂ ಅವರು ಅದನ್ನು ಪಾಲನೆ ಮಾಡಲಿಲ್ಲ. ಇದಕ್ಕೆ ಕಾರಣವನ್ನೂ ಅವರು ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗೃಹ ಬಳಕೆಯ ವಿದ್ಯುತ್ತನ್ನು ಉಚಿತವಾಗಿ ಬಳಸುವ ಆಸೆಯಲ್ಲಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ನೌಕರರಿಗೆ ಹೈಕೋರ್ಟ್ ಸೋಮವಾರ `ಶಾಕ್~ ನೀಡಿದೆ.<br /> <br /> 1997ರ ನಂತರ ಕೆಪಿಟಿಸಿಎಲ್ಗೆ ನೇಮಕಗೊಂಡಿರುವ ಸಿಬ್ಬಂದಿ ಉಚಿತವಾಗಿ ವಿದ್ಯುತ್ ಬಳಸುವುದಕ್ಕೆ ನಿರ್ಬಂಧ ಹೇರಿ ನಿಗಮದ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ನ್ಯಾಯಮೂರ್ತಿಗಳಾದ ಕೆ.ಶ್ರೀಧರರಾವ್ ಹಾಗೂ ಬಿ.ಎಸ್.ಇಂದ್ರಕಲಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಊರ್ಜಿತಗೊಳಿಸಿದೆ.<br /> <br /> 1984ರ ಮೇ 8ರಿಂದ ಕೆಪಿಟಿಸಿಎಲ್ನ ಎಲ್ಲ ಸಿಬ್ಬಂದಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ವಿದ್ಯುತ್ ಸರಬರಾಜು ಕಾಯ್ದೆಗೆ 1997ರ ಏ.17ರಂದು ತಿದ್ದುಪಡಿ ತರಲಾಯಿತು. ಈ ಅವಧಿಗಿಂತ ಮುಂಚಿತವಾಗಿ ಸೇರ್ಪಡೆಗೊಂಡಿರುವ ನೌಕರರಿಗೆ ಮಾತ್ರ ಉಚಿತವಾಗಿ ಗೃಹ ಬಳಕೆಯ ವಿದ್ಯುತ್ ಬಳಸಲು ಅನುಮತಿ ನೀಡಲಾಯಿತು. ಆದರೆ ಈ ಅವಧಿಯ ನಂತರ ನೇಮಕಗೊಂಡಿರುವ ನೌಕರರಿಗೆ ಈ ಅಧಿಕಾರ ಇಲ್ಲ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು. ಈ ರೀತಿ ತಿದ್ದುಪಡಿ ಮಾಡುವ ಅಧಿಕಾರ ಕೆಪಿಟಿಸಿಎಲ್ಗೆ ಇಲ್ಲ ಎನ್ನುವುದು ಅರ್ಜಿದಾರರ ವಾದವಾಗಿತ್ತು. <br /> <br /> ಆದರೆ ಈ ವಾದವನ್ನು ನ್ಯಾಯಮೂರ್ತಿಗಳು ತಳ್ಳಿ ಹಾಕಿದ್ದಾರೆ. `ವಿದ್ಯುತ್ ಸರಬರಾಜು ಕಾಯ್ದೆಯ 79(ಸಿ) ಅಡಿ ತಿದ್ದುಪಡಿ ಮಾಡುವ ಅಧಿಕಾರ ಕೆಪಿಟಿಸಿಎಲ್ಗೆ ಇದೆ. ಕೆಲವೊಂದು ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡೇ ನಿಗಮದ ಹಿತದೃಷ್ಟಿಯಿಂದ ಈ ತಿದ್ದುಪಡಿ ಮಾಡಲಾಗಿದೆ.<br /> <br /> 1997ಕ್ಕೂ ಮೊದಲು ನೇಮಕಗೊಂಡ ನೌಕರರಿಗೆ ಸಿಗುತ್ತಿರುವ ಸೌಲಭ್ಯಗಳು ತಮಗೂ ಸಿಗಬೇಕು ಎಂದು ನೌಕರರು ವಾದ ಮಾಡುವುದರಲ್ಲಿ ಅರ್ಥವಿಲ್ಲ. ಆದುದರಿಂದ ನೌಕರರ ನಡುವೆ ಭೇದ ಭಾವ ಎಸಗಲಾಗುತ್ತಿದೆ ಎಂಬ ವಾದದಲ್ಲಿ ಯಾವುದೇ ಹುರುಳು ಇಲ್ಲ~ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.<br /> <br /> <strong>ದ್ವಿಪತ್ನಿತ್ವ ಪ್ರಕರಣ: ಎಚ್ಡಿಕೆ ಸದ್ಯ ನಿರಾಳ</strong><br /> <br /> ದ್ವಿಪತ್ನಿತ್ವದ ಆರೋಪ ಎದುರಿಸುತ್ತಿರುವ ಸಂಸದ ಎಚ್.ಡಿ.ಕುಮಾರಸ್ವಾಮಿ ಸದ್ಯ ನಿರಾಳ.<br /> - ಕಾರಣ, ಹಿಂದು ವಿವಾಹ ಕಾಯ್ದೆಯನ್ನು ಉಲ್ಲಂಘಿಸಿ ಎರಡನೇ ಮದುವೆ ಆಗಿರುವ ಇವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.<br /> <br /> ಶಶಿಧರ ಬೆಳಗುಂಬ ಎನ್ನುವವರು ಸಲ್ಲಿಸಿದ್ದ ಅರ್ಜಿ ಇದಾಗಿದೆ. ಅನಿತಾ ಅವರನ್ನು ವಿವಾಹವಾಗಿರುವಾಗಲೇ ಅವರಿಗೆ ವಿಚ್ಛೇದನ ನೀಡದೆ ಚಿತ್ರನಟಿ ರಾಧಿಕಾ ಅವರನ್ನೂ ವಿವಾಹವಾಗಿರುವುದು ಕಾನೂನು ಉಲ್ಲಂಘನೆ ಎನ್ನುವುದು ಅವರ ಆರೋಪವಾಗಿತ್ತು. <br /> <br /> ಅರ್ಜಿಯಲ್ಲಿ ಕೆಲವೊಂದು ತಾಂತ್ರಿಕ ದೋಷಗಳು ಇದ್ದ ಹಿನ್ನೆಲೆಯಲ್ಲಿ ಅವುಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಈ ಹಿಂದೆ ಹಲವು ಬಾರಿ ಅರ್ಜಿದಾರರಿಗೆ ನಿರ್ದೇಶಿಸಿತ್ತು. ಆದರೂ ಅವರು ಅದನ್ನು ಪಾಲನೆ ಮಾಡಲಿಲ್ಲ. ಇದಕ್ಕೆ ಕಾರಣವನ್ನೂ ಅವರು ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>