<p><strong>ಬೆಂಗಳೂರು: `</strong>ನಗರದ ನೀರಿನ ಅಭಾವವನ್ನು ಮನಗಂಡಿರುವ ರಾಜ್ಯ ಸರ್ಕಾರ ಕೆರೆಗಳ ಸಂರಕ್ಷಣೆಗೆ ಬದ್ಧವಾಗಿದೆ~ ಎಂದು ಗೃಹ ಸಚಿವ ಆರ್.ಅಶೋಕ್ ಹೇಳಿದರು.ನಗರದ ಬನಶಂಕರಿ ಎರಡನೇ ಹಂತದ ಗಣೇಶ ವಾರ್ಡ್ನಲ್ಲಿ ನೂತನವಾಗಿ ನಿರ್ಮಿಸಿರುವ ಈಜುಕೊಳವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ನಗರದ ಕೆರೆಗಳ ಮಹತ್ವ ಅರಿತಿದ್ದ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡದ ವಿವಿಧ ಕಡೆಗಳಲ್ಲಿ ಕೆರೆಗಳನ್ನು ನಿರ್ಮಿಸಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಗರದ ಕೆರೆಗಳು ಮಾಯವಾಗಿವೆ. ಇದರಿಂದ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. <br /> <br /> ಇನ್ನು ಮುಂದಾದರೂ ನಗರದಲ್ಲಿ ಉಳಿದುಕೊಂಡಿರುವ ಕೆರೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಈಗಾಗಲೇ ನಗರದ 40 ಕೆರೆಗಳ ಸಂರಕ್ಷಣೆ ಮಾಡಲಾಗಿದೆ~ ಎಂದರು. ಮೇಯರ್ ಶಾರದಮ್ಮ, ಬಿಬಿಎಂಪಿ ಸದಸ್ಯರಾದ ವೆಂಕಟೇಶಮೂರ್ತಿ, ಎನ್.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ನಗರದ ನೀರಿನ ಅಭಾವವನ್ನು ಮನಗಂಡಿರುವ ರಾಜ್ಯ ಸರ್ಕಾರ ಕೆರೆಗಳ ಸಂರಕ್ಷಣೆಗೆ ಬದ್ಧವಾಗಿದೆ~ ಎಂದು ಗೃಹ ಸಚಿವ ಆರ್.ಅಶೋಕ್ ಹೇಳಿದರು.ನಗರದ ಬನಶಂಕರಿ ಎರಡನೇ ಹಂತದ ಗಣೇಶ ವಾರ್ಡ್ನಲ್ಲಿ ನೂತನವಾಗಿ ನಿರ್ಮಿಸಿರುವ ಈಜುಕೊಳವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ನಗರದ ಕೆರೆಗಳ ಮಹತ್ವ ಅರಿತಿದ್ದ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡದ ವಿವಿಧ ಕಡೆಗಳಲ್ಲಿ ಕೆರೆಗಳನ್ನು ನಿರ್ಮಿಸಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನಗರದ ಕೆರೆಗಳು ಮಾಯವಾಗಿವೆ. ಇದರಿಂದ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. <br /> <br /> ಇನ್ನು ಮುಂದಾದರೂ ನಗರದಲ್ಲಿ ಉಳಿದುಕೊಂಡಿರುವ ಕೆರೆಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಈಗಾಗಲೇ ನಗರದ 40 ಕೆರೆಗಳ ಸಂರಕ್ಷಣೆ ಮಾಡಲಾಗಿದೆ~ ಎಂದರು. ಮೇಯರ್ ಶಾರದಮ್ಮ, ಬಿಬಿಎಂಪಿ ಸದಸ್ಯರಾದ ವೆಂಕಟೇಶಮೂರ್ತಿ, ಎನ್.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>