ವೀರೇಂದ್ರ ಪರ ವಕೀಲ ಚಂದ್ರಮೌಳಿ, ‘ಹಣ ನಮ್ಮ ಅರ್ಜಿದಾರರದ್ದೇ ಎಂಬುದರಲ್ಲಿ ಯಾವುದೇ ತಕರಾರಿಲ್ಲ. ಈ ಹಣಕ್ಕೆ ಅರ್ಜಿದಾರರು ಆದಾಯ ತೆರಿಗೆ ಕಾಯ್ದೆಯ ಕಲಂ 69 (ಎ) ಅನುಸಾರ ಕಾಲಕಾಲಕ್ಕೆ ಸರಿಯಾಗಿ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆದರೆ, ರಾಜಕೀಯ ಪ್ರೇರಿತವಾಗಿ ದಾಳಿ ನಡೆಸಿ ದೂರು ದಾಖಲಿಸಲಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸಲು ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು. ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿದ್ದ ಪೀಠ ಆದೇಶ ಕಾಯ್ದಿರಿಸಿದೆ.