<p><strong>ಬೆಂಗಳೂರು:</strong> ಜನವರಿ 11 ರಂದು ಪ್ರಣಾಳಿಕೆ ಸಮಿತಿಯ ಪ್ರಮುಖ ಸಭೆ ನಡೆಯಲಿದ್ದು, 30 ಜಿಲ್ಲೆಗಳಲ್ಲೂ ನವ ಕರ್ನಾಟಕ ವಿಷನ್ ಸಿದ್ಧಪಡಿಸಲಾಗಿದೆ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿರುವ ವೀರಪ್ಪ ಮೊಯಿಲಿ ಅವರು ಪ್ರಣಾಳಿಕೆ ಸಮಿತಿ ರಚನೆ ಬಳಿಕ ಆರು ಪ್ರದೇಶಗಳಲ್ಲಿ ಸಭೆ ನಡೆಸುವುದಾಗಿ ಹೇಳಿದರು.</p>.<p>ಎಲ್ಲ ಜಿಲ್ಲೆಗಳ ವಿವಿಧ ವಿಭಾಗಗಳ ಪ್ರತಿನಿಧಿಗಳು ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಪ್ರತಿನಿಧಿಗಳಿಂದಿಗೂ ಚರ್ಚೆ ನಡೆಸಲಿದ್ದೇವೆ. ಸೋಮವಾರ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಯಲಿದೆ ಎಂದರು.</p>.<p>ಬಿ.ಎಲ್.ಶಂಕರ್ ನೇತೃತ್ವದಲ್ಲಿ ಈ ಹಿಂದಿನ ಪ್ರಣಾಳಿಕೆಯ ಪರಾಮರ್ಶೆ ನಡೆಸಲಾಗುತ್ತದೆ. ನಮ್ಮ ಪ್ರಣಾಳಿಕೆ ಜನಪರವಾಗಿರಲಿದೆ. ಆರ್ಥಿಕ, ಸಾಮಾಜಿಕವಾಗಿ ಆಮೂಲಾಗ್ರ ಬದಲಾವಣೆಯಾಗುವ ಐದು ಪ್ರಮುಖ ಕಾರ್ಯಕ್ರಮಗಳಿವೆ. ಕೇಂದ್ರದ ಚುನಾವಣಾ ಪ್ರಣಾಳಿಕೆಯ ಒಪ್ಪಿಗೆ ಬಳಿಕ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜನವರಿ 11 ರಂದು ಪ್ರಣಾಳಿಕೆ ಸಮಿತಿಯ ಪ್ರಮುಖ ಸಭೆ ನಡೆಯಲಿದ್ದು, 30 ಜಿಲ್ಲೆಗಳಲ್ಲೂ ನವ ಕರ್ನಾಟಕ ವಿಷನ್ ಸಿದ್ಧಪಡಿಸಲಾಗಿದೆ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ಹೇಳಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.</p>.<p>ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿರುವ ವೀರಪ್ಪ ಮೊಯಿಲಿ ಅವರು ಪ್ರಣಾಳಿಕೆ ಸಮಿತಿ ರಚನೆ ಬಳಿಕ ಆರು ಪ್ರದೇಶಗಳಲ್ಲಿ ಸಭೆ ನಡೆಸುವುದಾಗಿ ಹೇಳಿದರು.</p>.<p>ಎಲ್ಲ ಜಿಲ್ಲೆಗಳ ವಿವಿಧ ವಿಭಾಗಗಳ ಪ್ರತಿನಿಧಿಗಳು ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಪ್ರತಿನಿಧಿಗಳಿಂದಿಗೂ ಚರ್ಚೆ ನಡೆಸಲಿದ್ದೇವೆ. ಸೋಮವಾರ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಯಲಿದೆ ಎಂದರು.</p>.<p>ಬಿ.ಎಲ್.ಶಂಕರ್ ನೇತೃತ್ವದಲ್ಲಿ ಈ ಹಿಂದಿನ ಪ್ರಣಾಳಿಕೆಯ ಪರಾಮರ್ಶೆ ನಡೆಸಲಾಗುತ್ತದೆ. ನಮ್ಮ ಪ್ರಣಾಳಿಕೆ ಜನಪರವಾಗಿರಲಿದೆ. ಆರ್ಥಿಕ, ಸಾಮಾಜಿಕವಾಗಿ ಆಮೂಲಾಗ್ರ ಬದಲಾವಣೆಯಾಗುವ ಐದು ಪ್ರಮುಖ ಕಾರ್ಯಕ್ರಮಗಳಿವೆ. ಕೇಂದ್ರದ ಚುನಾವಣಾ ಪ್ರಣಾಳಿಕೆಯ ಒಪ್ಪಿಗೆ ಬಳಿಕ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>