<p>ಶಿವಮೊಗ್ಗ: `ಇದು ನ್ಯಾಯಕ್ಕೆ ಸಿಕ್ಕ ಜಯ. ನೆಲದ ಕಾನೂನಿಗೆ ಸಿಕ್ಕ ಗೌರವವಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಇದು ತೋರಿಸಿದೆ~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನದ ವಾರೆಂಟ್ ಜಾರಿಯಾದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.<br /> <br /> ಶನಿವಾರ ಇಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಮಟ್ಟದ ಚಿಂತನ-ಮಂಥನ ಸಮಾವೇಶದಲ್ಲಿ ಸಂಭ್ರಮ ವ್ಯಕ್ತವಾಯಿತು.<br /> ಚಿಂತನ-ಮಂಥನ ಸಮಾವೇಶ ನಡೆಯುತ್ತಿದ್ದಾಗ ಯಡಿಯೂರಪ್ಪ ವಿರುದ್ಧ ಜಾರಿಗೊಳಿಸಿದ ಬಂಧನದ ವಾರೆಂಟ್ ಸುದ್ದಿ ತಿಳಿಯುತ್ತಿದ್ದಂತೆ ವೇದಿಕೆಯಲ್ಲಿದ್ದ ಎಲ್ಲಾ ಕಾಂಗ್ರೆಸ್ ಮುಖಂಡರು ಎದ್ದು ನಿಂತು ಪರಸ್ಪರ ಕೈ ಕುಲುಕಿ, ಕೇಕೆ ಹಾಕಿ ಸಂಭ್ರಮಿಸಿದರು. ನಂತರ ಎಲ್ಲರೂ ಜನರತ್ತ ಕೈ ಬೀಸಿ ಒಗ್ಗಟ್ಟು ಪ್ರದರ್ಶಿಸಿದರು.<br /> <br /> ಸಿದ್ದರಾಮಯ್ಯ ಅವರು ಮಾತ್ರ ಪದೇ ಪದೇ ಎದ್ದು-ಕುಳಿತು `ಯಡಿಯೂರಪ್ಪಗೆ ಅಂತೂ ಜೈಲಾಯಿತು~ ಎಂದು ದೊಡ್ಡದಾಗಿ ಹೇಳುತ್ತಾ, ಕೈ ಮುಷ್ಠಿ ಕಟ್ಟಿ ಜನರತ್ತ ನೋಡಿ ಕೇಕೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: `ಇದು ನ್ಯಾಯಕ್ಕೆ ಸಿಕ್ಕ ಜಯ. ನೆಲದ ಕಾನೂನಿಗೆ ಸಿಕ್ಕ ಗೌರವವಾಗಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಇದು ತೋರಿಸಿದೆ~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹಾಗೂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನದ ವಾರೆಂಟ್ ಜಾರಿಯಾದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.<br /> <br /> ಶನಿವಾರ ಇಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಮಟ್ಟದ ಚಿಂತನ-ಮಂಥನ ಸಮಾವೇಶದಲ್ಲಿ ಸಂಭ್ರಮ ವ್ಯಕ್ತವಾಯಿತು.<br /> ಚಿಂತನ-ಮಂಥನ ಸಮಾವೇಶ ನಡೆಯುತ್ತಿದ್ದಾಗ ಯಡಿಯೂರಪ್ಪ ವಿರುದ್ಧ ಜಾರಿಗೊಳಿಸಿದ ಬಂಧನದ ವಾರೆಂಟ್ ಸುದ್ದಿ ತಿಳಿಯುತ್ತಿದ್ದಂತೆ ವೇದಿಕೆಯಲ್ಲಿದ್ದ ಎಲ್ಲಾ ಕಾಂಗ್ರೆಸ್ ಮುಖಂಡರು ಎದ್ದು ನಿಂತು ಪರಸ್ಪರ ಕೈ ಕುಲುಕಿ, ಕೇಕೆ ಹಾಕಿ ಸಂಭ್ರಮಿಸಿದರು. ನಂತರ ಎಲ್ಲರೂ ಜನರತ್ತ ಕೈ ಬೀಸಿ ಒಗ್ಗಟ್ಟು ಪ್ರದರ್ಶಿಸಿದರು.<br /> <br /> ಸಿದ್ದರಾಮಯ್ಯ ಅವರು ಮಾತ್ರ ಪದೇ ಪದೇ ಎದ್ದು-ಕುಳಿತು `ಯಡಿಯೂರಪ್ಪಗೆ ಅಂತೂ ಜೈಲಾಯಿತು~ ಎಂದು ದೊಡ್ಡದಾಗಿ ಹೇಳುತ್ತಾ, ಕೈ ಮುಷ್ಠಿ ಕಟ್ಟಿ ಜನರತ್ತ ನೋಡಿ ಕೇಕೆ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>