<p><strong>ಹುಬ್ಬಳ್ಳಿ: </strong>‘ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಬೆಂಗಳೂರಿಗೆ ಬಂದು ಸದ್ದು ಮಾಡಿದ್ದಾರೆಯೇ ಹೊರತು ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.<br /> <br /> ಇಲ್ಲಿನ ಚವ್ಹಾಣ್ ಗ್ರೀನ್ ಗಾರ್ಡನ್ನ ಶಿವಪುರ ಕಾಲೊನಿಯಲ್ಲಿರುವ ಶಿವಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ‘ವಾರಾಣಸಿಯಲ್ಲಿ ಕೇಜ್ರಿವಾಲ್ ಸ್ಪರ್ಧೆಯಿಂದ ನರೇಂದ್ರ ಮೋದಿ ಅವರಿಗೆ ಹಿನ್ನಡೆಯಾಗಲಿದೆಯೇ’ ಎಂಬ ಪ್ರಶ್ನೆಗೆ, ಹೊಟ್ಟೆ ಪಕ್ಷದ ರಂಗಸ್ವಾಮಿಯೂ ಈ ಹಿಂದೆ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು ಎಂದು ಮಾರ್ಮಿಕವಾಗಿ ನುಡಿದರು.<br /> <br /> ‘ಪ್ರಮೋದ್ ಮುತಾಲಿಕ್ ಸ್ಪರ್ಧೆಯಿಂದ ಹಿಂದೂಗಳ ಮತ ವಿಭಜನೆಯಾಗಿ ನನಗೆ ತೊಂದರೆಯಾಗಲಿದೆ ಎನ್ನುವುದು ಸುಳ್ಳು. ವಾಸ್ತವವಾಗಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ –ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತ್ರಿಕೋನ ಸ್ಪರ್ಧೆ ಇದೆ’ ಎಂದರು.<br /> ಬೀದರ್, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಂಗಳವಾರ ಅಂತಿಮಗೊಳ್ಳಲಿದೆ. ನರೇಂದ್ರ ಮೋದಿ ರಾಜ್ಯದಲ್ಲಿ ಇನ್ನೂ ಮೂರು ರ್ಯಾಲಿಗಳಲ್ಲಿಪಾಲ್ಗೊಳ್ಳಲಿದ್ದು, ಶೀಘ್ರ ಸ್ಥಳ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಬೆಂಗಳೂರಿಗೆ ಬಂದು ಸದ್ದು ಮಾಡಿದ್ದಾರೆಯೇ ಹೊರತು ಚುನಾವಣೆ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.<br /> <br /> ಇಲ್ಲಿನ ಚವ್ಹಾಣ್ ಗ್ರೀನ್ ಗಾರ್ಡನ್ನ ಶಿವಪುರ ಕಾಲೊನಿಯಲ್ಲಿರುವ ಶಿವಮಂದಿರದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ‘ವಾರಾಣಸಿಯಲ್ಲಿ ಕೇಜ್ರಿವಾಲ್ ಸ್ಪರ್ಧೆಯಿಂದ ನರೇಂದ್ರ ಮೋದಿ ಅವರಿಗೆ ಹಿನ್ನಡೆಯಾಗಲಿದೆಯೇ’ ಎಂಬ ಪ್ರಶ್ನೆಗೆ, ಹೊಟ್ಟೆ ಪಕ್ಷದ ರಂಗಸ್ವಾಮಿಯೂ ಈ ಹಿಂದೆ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು ಎಂದು ಮಾರ್ಮಿಕವಾಗಿ ನುಡಿದರು.<br /> <br /> ‘ಪ್ರಮೋದ್ ಮುತಾಲಿಕ್ ಸ್ಪರ್ಧೆಯಿಂದ ಹಿಂದೂಗಳ ಮತ ವಿಭಜನೆಯಾಗಿ ನನಗೆ ತೊಂದರೆಯಾಗಲಿದೆ ಎನ್ನುವುದು ಸುಳ್ಳು. ವಾಸ್ತವವಾಗಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ –ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ತ್ರಿಕೋನ ಸ್ಪರ್ಧೆ ಇದೆ’ ಎಂದರು.<br /> ಬೀದರ್, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಂಗಳವಾರ ಅಂತಿಮಗೊಳ್ಳಲಿದೆ. ನರೇಂದ್ರ ಮೋದಿ ರಾಜ್ಯದಲ್ಲಿ ಇನ್ನೂ ಮೂರು ರ್ಯಾಲಿಗಳಲ್ಲಿಪಾಲ್ಗೊಳ್ಳಲಿದ್ದು, ಶೀಘ್ರ ಸ್ಥಳ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>