<p><strong>ಮಂಗಳೂರು:</strong> ರಾಜ್ಯದಲ್ಲಿರುವ ಕೈಗಾರಿಕಾ ವಸಾಹತುಗಳ ಅಭಿವೃದ್ಧಿಗಾಗಿ ‘ಕೈಗಾರಿಕಾ ನಗರ ಪ್ರಾಧಿಕಾರ’ಗಳನ್ನು (ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ) ಸ್ಥಾಪಿಸಲು ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯಿದೆ –1976’ ಕ್ಕೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.</p>.<p>ಲೆಕ್ಟ್ರಾನಿಕ್ ಸಿಟಿಯನ್ನು ಹೊರತುಪಡಿಸಿದರೆ, ರಾಜ್ಯದಲ್ಲಿರುವ ಉಳಿದ ಕೈಗಾರಿಕಾ ವಸಾಹತುಗಳು ಸ್ಥಳೀಯಾಡಳಿತ ಸಂಸ್ಥೆಗಳ ಅಧೀನ ದಲ್ಲಿವೆ. ಪ್ರಾಧಿಕಾರವು ಅಸ್ತಿತ್ವಕ್ಕೆ ಬಂದ ಬಳಿಕ ಮೂಲಸೌಕರ್ಯ ಒದಗಿ ಸುವುದು, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರ ಪ್ರಾಧಿಕಾರಕ್ಕೆ ದೊರಕುತ್ತದೆ ಎಂದು ವಿವರಿಸಿದರು.</p>.<p>‘ಈ ಬಗ್ಗೆ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಜೊತೆ ಚರ್ಚಿಸಿ, ತಿದ್ದುಪಡಿಯನ್ನು ಮಸೂದೆಯನ್ನು ಮಂಡಿಸಲಾಗುವುದು. ಪ್ರಾಧಿಕಾರದಲ್ಲಿ ಎಂಟು ಸದಸ್ಯರು ಇರಲಿದ್ದಾರೆ. ಈ ಪೈಕಿ ಐವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿದರೆ, ಒಬ್ಬರು ಸ್ಥಳೀಯ ವಾಣಿಜ್ಯೋದ್ಯಮ ಸಂಸ್ಥೆಯ ಪ್ರತಿನಿಧಿ, ಇನ್ನೊಬ್ಬರು ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿ ಹಾಗೂ ಒಬ್ಬರು ಸ್ಥಳೀಯ ಕೈಗಾರಿಕೋದ್ಯಮಿ ಇರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಾಜ್ಯದಲ್ಲಿರುವ ಕೈಗಾರಿಕಾ ವಸಾಹತುಗಳ ಅಭಿವೃದ್ಧಿಗಾಗಿ ‘ಕೈಗಾರಿಕಾ ನಗರ ಪ್ರಾಧಿಕಾರ’ಗಳನ್ನು (ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ) ಸ್ಥಾಪಿಸಲು ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯಿದೆ –1976’ ಕ್ಕೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.</p>.<p>ಲೆಕ್ಟ್ರಾನಿಕ್ ಸಿಟಿಯನ್ನು ಹೊರತುಪಡಿಸಿದರೆ, ರಾಜ್ಯದಲ್ಲಿರುವ ಉಳಿದ ಕೈಗಾರಿಕಾ ವಸಾಹತುಗಳು ಸ್ಥಳೀಯಾಡಳಿತ ಸಂಸ್ಥೆಗಳ ಅಧೀನ ದಲ್ಲಿವೆ. ಪ್ರಾಧಿಕಾರವು ಅಸ್ತಿತ್ವಕ್ಕೆ ಬಂದ ಬಳಿಕ ಮೂಲಸೌಕರ್ಯ ಒದಗಿ ಸುವುದು, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರ ಪ್ರಾಧಿಕಾರಕ್ಕೆ ದೊರಕುತ್ತದೆ ಎಂದು ವಿವರಿಸಿದರು.</p>.<p>‘ಈ ಬಗ್ಗೆ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಜೊತೆ ಚರ್ಚಿಸಿ, ತಿದ್ದುಪಡಿಯನ್ನು ಮಸೂದೆಯನ್ನು ಮಂಡಿಸಲಾಗುವುದು. ಪ್ರಾಧಿಕಾರದಲ್ಲಿ ಎಂಟು ಸದಸ್ಯರು ಇರಲಿದ್ದಾರೆ. ಈ ಪೈಕಿ ಐವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿದರೆ, ಒಬ್ಬರು ಸ್ಥಳೀಯ ವಾಣಿಜ್ಯೋದ್ಯಮ ಸಂಸ್ಥೆಯ ಪ್ರತಿನಿಧಿ, ಇನ್ನೊಬ್ಬರು ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿ ಹಾಗೂ ಒಬ್ಬರು ಸ್ಥಳೀಯ ಕೈಗಾರಿಕೋದ್ಯಮಿ ಇರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>