‘ಚಂದ್ರು (29), ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ನಾಗಲಾಪುರ ಗ್ರಾಮದವರು. 2017ರಲ್ಲಿ ಮನೆಯ ಮುಂದೆ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಚೇಳೂರು ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಶನಿವಾರ ವಿಚಾರಣೆಗೆ ಕರೆತರಲಾಗಿತ್ತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ತಿಳಿಸಿದರು.