<p><strong>ಬೆಂಗಳೂರು</strong> (ಪ್ರಜಾವಾಣಿ ವಾರ್ತೆ): ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಡಿ. ರಾಜೇಂದ್ರ ಬಾಬು ಅವರು ತೀವ್ರ ಹೃದಾಯಘಾತದಿಂದ ಬಾನುವಾರ ನಿಧನರಾಗಿದ್ದಾರೆ.</p>.<p>ಕಳೆದ ಕೆಲವು ದಿನಗಳಿಂದ ರಾಜೇಂದ್ರ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಹೃದಾಯಘಾತವಾದ್ದರಿಂದ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಬು ನಿಧನರಾದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ.<br /> <br /> 35ಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಬಾಬು ನಿರ್ದೇಶಿಸಿದ್ದರು. ತಮಿಳು ತೆಲುಗು ಸೇರಿದಂತೆ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದರು. ರಾಜೇಂದ್ರ ಬಾಬು ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಿರಿಯರು ಮತ್ತು ಕಿರಿಯರು ಕಂಬಂನಿ ಮಿಡಿದಿದ್ದಾರೆ.<br /> <br /> ಬಾಬು ಅವರು ಜೀವನದಿ, ಯುಗಪುರುಷ, ರಾಮಾಚಾರಿ, ದಿಗ್ಗಜರು ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ಕನ್ನಡ ಸಿನಿಮಾರಂಗಕ್ಕೆ ನೀಡಿದ್ದರು. ಇತ್ತೀಚೆಗೆ ಶಿವರಾಜ್ ಕುಮಾರ್ ಅಭಿನಯದ ಆರ್ಯನ್ ಚಿತ್ರವನ್ನು ನಿರ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong> (ಪ್ರಜಾವಾಣಿ ವಾರ್ತೆ): ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಡಿ. ರಾಜೇಂದ್ರ ಬಾಬು ಅವರು ತೀವ್ರ ಹೃದಾಯಘಾತದಿಂದ ಬಾನುವಾರ ನಿಧನರಾಗಿದ್ದಾರೆ.</p>.<p>ಕಳೆದ ಕೆಲವು ದಿನಗಳಿಂದ ರಾಜೇಂದ್ರ ಬಾಬು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಹೃದಾಯಘಾತವಾದ್ದರಿಂದ ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಬು ನಿಧನರಾದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ.<br /> <br /> 35ಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಬಾಬು ನಿರ್ದೇಶಿಸಿದ್ದರು. ತಮಿಳು ತೆಲುಗು ಸೇರಿದಂತೆ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದರು. ರಾಜೇಂದ್ರ ಬಾಬು ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಿರಿಯರು ಮತ್ತು ಕಿರಿಯರು ಕಂಬಂನಿ ಮಿಡಿದಿದ್ದಾರೆ.<br /> <br /> ಬಾಬು ಅವರು ಜೀವನದಿ, ಯುಗಪುರುಷ, ರಾಮಾಚಾರಿ, ದಿಗ್ಗಜರು ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳನ್ನು ಕನ್ನಡ ಸಿನಿಮಾರಂಗಕ್ಕೆ ನೀಡಿದ್ದರು. ಇತ್ತೀಚೆಗೆ ಶಿವರಾಜ್ ಕುಮಾರ್ ಅಭಿನಯದ ಆರ್ಯನ್ ಚಿತ್ರವನ್ನು ನಿರ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>