<p><strong>ಬೆಂಗಳೂರು:</strong> ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಕೊಟ್ಟಿರುವ ವರದಿ ಪರಿಶೀಲನೆ ಭರದಿಂದ ಸಾಗಿದೆ. ಸೋಮವಾರ ಕೂಡ ಎಂಟು ಗಂಟೆಗಳ ಕಾಲ ವರದಿ ಬಗ್ಗೆ ಚರ್ಚಿಸಲಾಗಿದೆ.<br /> <br /> ವರದಿ ಪರಿಶೀಲಿಸಿ, ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ನೇತೃತ್ವದ ಮೂವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿತ್ತು.<br /> ಈ ಸಮಿತಿ ಇದುವರೆಗೂ ನಾಲ್ಕು ಭಾರಿ ಸಭೆ ನಡೆಸಿದ್ದು, ಈ ತಿಂಗಳ ಒಳಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.<br /> <br /> ಲೋಕಾಯುಕ್ತ ವರದಿಯ ಪ್ರಕಾರ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಿದ್ದು, ಆ ಕೆಲಸವನ್ನು ಸಂಬಂಧಪಟ್ಟ ಇಲಾಖೆಗಳಿಗೆ ವಹಿಸಲಾಗಿದೆ. ಇದಲ್ಲದೆ, ಗಣಿ ಅಕ್ರಮ ತಡೆಯಲು ಯಾವ ರೀತಿಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. <br /> <br /> ಸೋಮವಾರ ಕೇವಲ ಗಣಿ ಇಲಾಖೆ ಕಾರ್ಯದರ್ಶಿ, ನಿರ್ದೇಶಕರು ಸೇರಿದಂತೆ ಇತರ ಹಿರಿಯ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿತ್ತು. ಅವರಿಗೆ ಲೋಕಾಯುಕ್ತ ವರದಿ ಪ್ರಕಾರ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ.<br /> <br /> ಲೋಕಾಯುಕ್ತ ವರದಿಯಲ್ಲಿ ಗಣಿಧಣಿಗಳಿಂದ ಮಾಮೂಲಿ ಪಡೆಯುತ್ತಿದ್ದ ಅಧಿಕಾರಿಗಳ ಹೆಸರು ಅನೇಕ ಕಡೆ ಇಲ್ಲ. ಬದಲಿಗೆ ಹುದ್ದೆಗಳ ಹೆಸರು ಇದ್ದು, ಆ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳ ವಿವರ ಪತ್ತೆ ಹಚ್ಚಲು ಸೂಚಿಸಲಾಗಿದೆ. ಆ ನಂತರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದೂ ಹೇಳಲಾಗಿದೆ. <br /> <br /> ಜೈರಾಜ್ ಅಲ್ಲದೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೀರ್ ಹರಿಸಿಂಗ್, ಮೀರಾ ಸಕ್ಸೇನಾ, ಶಮೀಮ್ ಬಾನು ಸಭೆಯಲ್ಲಿ ಹಾಜರಿದ್ದರು. ಮಂಗಳವಾರ ಕೂಡ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ಕೊಟ್ಟಿರುವ ವರದಿ ಪರಿಶೀಲನೆ ಭರದಿಂದ ಸಾಗಿದೆ. ಸೋಮವಾರ ಕೂಡ ಎಂಟು ಗಂಟೆಗಳ ಕಾಲ ವರದಿ ಬಗ್ಗೆ ಚರ್ಚಿಸಲಾಗಿದೆ.<br /> <br /> ವರದಿ ಪರಿಶೀಲಿಸಿ, ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ನೇತೃತ್ವದ ಮೂವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿತ್ತು.<br /> ಈ ಸಮಿತಿ ಇದುವರೆಗೂ ನಾಲ್ಕು ಭಾರಿ ಸಭೆ ನಡೆಸಿದ್ದು, ಈ ತಿಂಗಳ ಒಳಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.<br /> <br /> ಲೋಕಾಯುಕ್ತ ವರದಿಯ ಪ್ರಕಾರ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಿದ್ದು, ಆ ಕೆಲಸವನ್ನು ಸಂಬಂಧಪಟ್ಟ ಇಲಾಖೆಗಳಿಗೆ ವಹಿಸಲಾಗಿದೆ. ಇದಲ್ಲದೆ, ಗಣಿ ಅಕ್ರಮ ತಡೆಯಲು ಯಾವ ರೀತಿಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. <br /> <br /> ಸೋಮವಾರ ಕೇವಲ ಗಣಿ ಇಲಾಖೆ ಕಾರ್ಯದರ್ಶಿ, ನಿರ್ದೇಶಕರು ಸೇರಿದಂತೆ ಇತರ ಹಿರಿಯ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿತ್ತು. ಅವರಿಗೆ ಲೋಕಾಯುಕ್ತ ವರದಿ ಪ್ರಕಾರ ಮುಂದೇನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ.<br /> <br /> ಲೋಕಾಯುಕ್ತ ವರದಿಯಲ್ಲಿ ಗಣಿಧಣಿಗಳಿಂದ ಮಾಮೂಲಿ ಪಡೆಯುತ್ತಿದ್ದ ಅಧಿಕಾರಿಗಳ ಹೆಸರು ಅನೇಕ ಕಡೆ ಇಲ್ಲ. ಬದಲಿಗೆ ಹುದ್ದೆಗಳ ಹೆಸರು ಇದ್ದು, ಆ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳ ವಿವರ ಪತ್ತೆ ಹಚ್ಚಲು ಸೂಚಿಸಲಾಗಿದೆ. ಆ ನಂತರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದೂ ಹೇಳಲಾಗಿದೆ. <br /> <br /> ಜೈರಾಜ್ ಅಲ್ಲದೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೀರ್ ಹರಿಸಿಂಗ್, ಮೀರಾ ಸಕ್ಸೇನಾ, ಶಮೀಮ್ ಬಾನು ಸಭೆಯಲ್ಲಿ ಹಾಜರಿದ್ದರು. ಮಂಗಳವಾರ ಕೂಡ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>