<p><strong>ಹುಬ್ಬಳ್ಳಿ: </strong>ಗುಜರಾತ್ನ ಅಹ್ಮದಾಬಾದ್ನಲ್ಲಿ ಮನೆ ಕೆಲಸ ಮಾಡುತ್ತಿದ್ದ ಕರ್ನಾಟಕ ಮೂಲದ ರೇಖಾ ಅಲಿಯಾಸ್ ಶಹನಾಜ್ ಎಂಬ ಮಹಿಳೆ ಮನೆ ಮಾಲೀಕರ 5 ವರ್ಷದ ಮಗಳನ್ನು ಅಪಹರಿಸಿಕೊಂಡು ಬಂದಿರುವ ಶಂಕೆ ಇದ್ದು, ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆಗಳಲ್ಲಿ ಓಡಾಡುತ್ತಿರುವುದು ಮೊಬೈಲ್ ಕರೆ ವಿವರ ಪರಿಶೀಲಿಸಿದಾಗ ಗೊತ್ತಾಗಿದೆ.</p>.<p>ಅಕ್ಟೋಬರ್ 14ರಂದು ಮಗಳು ಕಿಂಜಲ್ಳನ್ನು ರೇಖಾ ಅಪಹರಿಸಿಕೊಂಡು ಹೋಗಿದ್ದಾಳೆ ಎಂದು ಮನೆ ಒಡತಿ ಮನಿಷಾ ಗುಜರಾತ್ನ ಮಣಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>'ರೇಖಾಳ ಮೊಬೈಲ್ ಕರೆ ವಿವರಗಳನ್ನು ಪರಿಶೀಲಿಸಿದಾಗ ನವೆಂಬರ್ 25ರಿಂದ 30ರವರೆಗೆ ಆಕೆ ಹುಬ್ಬಳ್ಳಿಯ ಅರವಿಂದ ನಗರ, ನವಲಗುಂದ, ನರಗುಂದ ಹಾಗೂ ಗದಗ ನಗರಗಳ ವಿವಿಧ ಟವರ್ಗಳ ವ್ಯಾಪ್ತಿಯಲ್ಲಿ ಓಡಾಡಿರುವುದು ಗೊತ್ತಾಗಿದೆ’ ಎಂದು ಮಣಿನಗರ ಇನ್ಸ್ಪೆಕ್ಟರ್ ಚೇತನ್ ಜಡೇಜಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>'ರೇಖಾ ಹಾಗೂ ಕಿಂಜಲ್ಳನ್ನು ಪತ್ತೆ ಹಚ್ಚಿದವರಿಗೆ ₹ 10 ಸಾವಿರ ಬಹುಮಾನ ನೀಡಲಾಗುವುದು. 98793 24147 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡಬಹುದು' ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಗುಜರಾತ್ನ ಅಹ್ಮದಾಬಾದ್ನಲ್ಲಿ ಮನೆ ಕೆಲಸ ಮಾಡುತ್ತಿದ್ದ ಕರ್ನಾಟಕ ಮೂಲದ ರೇಖಾ ಅಲಿಯಾಸ್ ಶಹನಾಜ್ ಎಂಬ ಮಹಿಳೆ ಮನೆ ಮಾಲೀಕರ 5 ವರ್ಷದ ಮಗಳನ್ನು ಅಪಹರಿಸಿಕೊಂಡು ಬಂದಿರುವ ಶಂಕೆ ಇದ್ದು, ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆಗಳಲ್ಲಿ ಓಡಾಡುತ್ತಿರುವುದು ಮೊಬೈಲ್ ಕರೆ ವಿವರ ಪರಿಶೀಲಿಸಿದಾಗ ಗೊತ್ತಾಗಿದೆ.</p>.<p>ಅಕ್ಟೋಬರ್ 14ರಂದು ಮಗಳು ಕಿಂಜಲ್ಳನ್ನು ರೇಖಾ ಅಪಹರಿಸಿಕೊಂಡು ಹೋಗಿದ್ದಾಳೆ ಎಂದು ಮನೆ ಒಡತಿ ಮನಿಷಾ ಗುಜರಾತ್ನ ಮಣಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>'ರೇಖಾಳ ಮೊಬೈಲ್ ಕರೆ ವಿವರಗಳನ್ನು ಪರಿಶೀಲಿಸಿದಾಗ ನವೆಂಬರ್ 25ರಿಂದ 30ರವರೆಗೆ ಆಕೆ ಹುಬ್ಬಳ್ಳಿಯ ಅರವಿಂದ ನಗರ, ನವಲಗುಂದ, ನರಗುಂದ ಹಾಗೂ ಗದಗ ನಗರಗಳ ವಿವಿಧ ಟವರ್ಗಳ ವ್ಯಾಪ್ತಿಯಲ್ಲಿ ಓಡಾಡಿರುವುದು ಗೊತ್ತಾಗಿದೆ’ ಎಂದು ಮಣಿನಗರ ಇನ್ಸ್ಪೆಕ್ಟರ್ ಚೇತನ್ ಜಡೇಜಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>'ರೇಖಾ ಹಾಗೂ ಕಿಂಜಲ್ಳನ್ನು ಪತ್ತೆ ಹಚ್ಚಿದವರಿಗೆ ₹ 10 ಸಾವಿರ ಬಹುಮಾನ ನೀಡಲಾಗುವುದು. 98793 24147 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡಬಹುದು' ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>