ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ನ ಎಂ.ನಾರಾಯಣ ಸ್ವಾಮಿ ಶುಕ್ರವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಪಂಪ್ ಆಪರೇಟರ್ಗಳಿಗೆ, ಸ್ವಚ್ಛತಾಗಾರರಿಗೆ ಕನಿಷ್ಟ ವೇತನ ನೀಡಬೇಕು ಎಂದು ಈಗಾಗಲೇ ಸುತ್ತೋಲೆ ಕಳುಹಿಸಿದ್ದೇವೆ. ಇದನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಗುತ್ತಿಗೆ ನೌಕರರಿಗೂ ವೇತನದ ಶೇ 10ರಷ್ಟು ಭವಿಷ್ಯ ನಿಧಿಯ ಪಾಲು ನೀಡುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.