<p>ಹುನಗುಂದ (ಬಾಗಲಕೋಟೆ ಜಿಲ್ಲೆ): ಪಟ್ಟಣದ ಯುವ ಛಾಯಾಗ್ರಾಹಕ ಶ್ರೀಶೈಲ ಹೊಸಮನಿ (ಕಾರ್ತೀಕ್) ಕ್ಯಾಮೆರಾದಲ್ಲಿ ಸೆರೆಯಾದ ‘ಗುಬ್ಬಚ್ಚಿ ಹಿಡಿದ ಹಸಿರು ಹಾವಿನ’ ಚಿತ್ರಕ್ಕೆ ಅಂತರರಾಷ್ಟ್ರೀಯ ಬಹುಮಾನ ಲಭಿಸಿದೆ.<br /> <br /> ಉತ್ತರ ಪ್ರದೇಶದ ಲಖನೌ ಕ್ಯಾಮೆರಾ ಕ್ಲಬ್ ಸಂಸ್ಥೆ ಇತ್ತೀಚೆಗೆ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಹೊಸಮನಿ ಅವರ ಈ ಚಿತ್ರ ಬಹುಮಾನ ಪಡೆದಿದೆ ಎಂದು ಎಲ್ಸಿಸಿ ಅಧ್ಯಕ್ಷ ಅನಿಲ್ ರಿಸಾಲ್ ಸಿಂಗ್ ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ಡಾ.ರಜತ್ ಡೇ ಅವರ ಸ್ಮರಣಾರ್ಥ ನೀಡಲಾಗುತ್ತದೆ ಎಂದು ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಇವರಿಗೆ ನಿಸರ್ಗ ವಿಭಾಗದಲ್ಲಿ ಬಹುಮಾನ ಸಿಕ್ಕಿದೆ. ಇದಲ್ಲದೇ, ಇವರ ಇನ್ನೂ ಮೂರು ಚಿತ್ರಗಳು ಅಂತರರಾಷ್ಟ್ರೀಯ ಪ್ರದರ್ಶನ–2014 ಕ್ಕೆ ಆಯ್ಕೆಯಾಗಿವೆ.<br /> <br /> ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾ, ಜರ್ಮನಿ, ಗ್ರೀಸ್, ಈಜಿಪ್ಟ್, ಚೀನಾ, ಅಮೆರಿಕ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಸ್ವಿಟ್ಜರ್ಲೆಂಡ್, ಸ್ಪೇನ್, ಫ್ರಾನ್ಸ್, ರಷ್ಯಾ, ಇಟಲಿ, ದಕ್ಷಿಣ ಕೊರಿಯಾ, ನೆದರ್ಲ್ಯಾಂಡ್, ಟರ್ಕಿ ಸೇರಿದಂತೆ 48 ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುನಗುಂದ (ಬಾಗಲಕೋಟೆ ಜಿಲ್ಲೆ): ಪಟ್ಟಣದ ಯುವ ಛಾಯಾಗ್ರಾಹಕ ಶ್ರೀಶೈಲ ಹೊಸಮನಿ (ಕಾರ್ತೀಕ್) ಕ್ಯಾಮೆರಾದಲ್ಲಿ ಸೆರೆಯಾದ ‘ಗುಬ್ಬಚ್ಚಿ ಹಿಡಿದ ಹಸಿರು ಹಾವಿನ’ ಚಿತ್ರಕ್ಕೆ ಅಂತರರಾಷ್ಟ್ರೀಯ ಬಹುಮಾನ ಲಭಿಸಿದೆ.<br /> <br /> ಉತ್ತರ ಪ್ರದೇಶದ ಲಖನೌ ಕ್ಯಾಮೆರಾ ಕ್ಲಬ್ ಸಂಸ್ಥೆ ಇತ್ತೀಚೆಗೆ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಹೊಸಮನಿ ಅವರ ಈ ಚಿತ್ರ ಬಹುಮಾನ ಪಡೆದಿದೆ ಎಂದು ಎಲ್ಸಿಸಿ ಅಧ್ಯಕ್ಷ ಅನಿಲ್ ರಿಸಾಲ್ ಸಿಂಗ್ ತಿಳಿಸಿದ್ದಾರೆ. ಈ ಪ್ರಶಸ್ತಿಯನ್ನು ಡಾ.ರಜತ್ ಡೇ ಅವರ ಸ್ಮರಣಾರ್ಥ ನೀಡಲಾಗುತ್ತದೆ ಎಂದು ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಇವರಿಗೆ ನಿಸರ್ಗ ವಿಭಾಗದಲ್ಲಿ ಬಹುಮಾನ ಸಿಕ್ಕಿದೆ. ಇದಲ್ಲದೇ, ಇವರ ಇನ್ನೂ ಮೂರು ಚಿತ್ರಗಳು ಅಂತರರಾಷ್ಟ್ರೀಯ ಪ್ರದರ್ಶನ–2014 ಕ್ಕೆ ಆಯ್ಕೆಯಾಗಿವೆ.<br /> <br /> ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾ, ಜರ್ಮನಿ, ಗ್ರೀಸ್, ಈಜಿಪ್ಟ್, ಚೀನಾ, ಅಮೆರಿಕ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಸ್ವಿಟ್ಜರ್ಲೆಂಡ್, ಸ್ಪೇನ್, ಫ್ರಾನ್ಸ್, ರಷ್ಯಾ, ಇಟಲಿ, ದಕ್ಷಿಣ ಕೊರಿಯಾ, ನೆದರ್ಲ್ಯಾಂಡ್, ಟರ್ಕಿ ಸೇರಿದಂತೆ 48 ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>