<p><strong>ಬೆಂಗಳೂರು: </strong>ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 105ನೇ ಗುರುವಂದನೆ ಕಾರ್ಯಕ್ರಮದಿಂದ ಬಿಜೆಪಿಗೆ ಸೇರಿದ ಲಿಂಗಾಯತ ಮುಖಂಡರು ದೂರ ಉಳಿಯುವ ಸಾಧ್ಯತೆ ಇದೆ.<br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಸೇರಿದ ಬಹುತೇಕ ಸಚಿವರು ಮತ್ತು ಶಾಸಕರು ಸಮಾರಂಭಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ.<br /> <br /> ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಹಾಗೂ ಅವರ ಆಪ್ತ ಲಿಂಗಾಯತ ಸಚಿವರು ವಿವಿಧ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದಾರೆ. ಸಚಿವ ಸೋಮಣ್ಣ ಹಾಸನ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. `ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಬಂದಿಲ್ಲ. ಹೀಗಾಗಿ ಹೋಗುತ್ತಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.<br /> <br /> `ಶಿವಕುಮಾರ ಸ್ವಾಮಿಗಳ ಗುರುವಂದನೆ ಅಂದರೆ ಅದೊಂದು ಜಾತ್ಯತೀತ ಮತ್ತು ಪಕ್ಷಾತೀತ ಕಾರ್ಯಕ್ರಮ. ಯಾರೇ ಮುಖ್ಯಮಂತ್ರಿಯಾಗಿದ್ದರೂ ಗುರುವಂದನೆ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದು ರೂಢಿ. ಆದರೆ, ಈ ಸಲ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖರನ್ನೂ ಕಡೆಗಣಿಸಿ ಕಾರ್ಯಕ್ರಮ ಮಾಡಲಾಗುತ್ತಿದೆ. ಇದು ನೋವಿನ ಸಂಗತಿ~ ಎಂದು ಗುರುವಂದನೆ ಕಾರ್ಯಕ್ರಮದ ರೂವಾರಿಗಳಲ್ಲಿ ಒಬ್ಬರಾದ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.<br /> <br /> `ಈಗ ನಡೆಯುತ್ತಿರುವ ಗುರುವಂದನೆ ಒಂದು ರೀತಿ ಪಕ್ಷವೊಂದರ ಕಾರ್ಯಕ್ರಮದಂತೆ ಇದೆ ಎಂದು ಸ್ಥಳೀಯರು ದೂರವಾಣಿ ಕರೆ ಮಾಡಿ ಹೇಳುತ್ತಿದ್ದಾರೆ. ಪಕ್ಷಾತೀತವಾದ ಮಠದಲ್ಲಿ ಈ ರೀತಿ ಮಾಡುವುದು ಸರಿಯೇ ಎಂದೂ ಜನ ಕೇಳುತ್ತಿದ್ದಾರೆ~ ಎಂದರು.<br /> <br /> `ನಾನು ಮಠದ ಪರಮಭಕ್ತ. ಶಿವಕುಮಾರ ಸ್ವಾಮೀಜಿ ನನ್ನ ಪಾಲಿಗೆ ನಡೆದಾಡುವ ದೇವರು. ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಭದ್ರತೆ, ಅದೂ ಇದೂ ಎಂದು ನೆಪ ಹೇಳಿ ಸಮಾಜದ ಪ್ರಮುಖರನ್ನು ಕಾರ್ಯಕ್ರಮದಿಂದ ಹೊರಗೆ ಇಡಲಾಗಿದೆ. <br /> <br /> ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಷ್ಟ್ರಪತಿಗಳು ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗಲೂ ವೇದಿಕೆಯಲ್ಲಿ 12 ಮಂದಿ ಗಣ್ಯರಿಗೆ ಕೂರಲು ವ್ಯವಸ್ಥೆ ಮಾಡಿಸಿದ್ದೆ. ಈಗಲೂ ಅದೇ ರೀತಿ ಮಾಡಬಹುದಿತ್ತು. ಒಂದು ಪಕ್ಷದ ಅಧ್ಯಕ್ಷರನ್ನು ಮಾತ್ರ ಕೂರಿಸಿಕೊಂಡು ಗುರುವಂದನೆ ಮಾಡುವುದು ಸರಿಯೇ ಎಂದು ಜನ ಕೇಳುತ್ತಿದ್ದಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ 105ನೇ ಗುರುವಂದನೆ ಕಾರ್ಯಕ್ರಮದಿಂದ ಬಿಜೆಪಿಗೆ ಸೇರಿದ ಲಿಂಗಾಯತ ಮುಖಂಡರು ದೂರ ಉಳಿಯುವ ಸಾಧ್ಯತೆ ಇದೆ.<br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಸತಿ ಸಚಿವ ವಿ.ಸೋಮಣ್ಣ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಸೇರಿದ ಬಹುತೇಕ ಸಚಿವರು ಮತ್ತು ಶಾಸಕರು ಸಮಾರಂಭಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ.<br /> <br /> ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಹಾಗೂ ಅವರ ಆಪ್ತ ಲಿಂಗಾಯತ ಸಚಿವರು ವಿವಿಧ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದಾರೆ. ಸಚಿವ ಸೋಮಣ್ಣ ಹಾಸನ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. `ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಬಂದಿಲ್ಲ. ಹೀಗಾಗಿ ಹೋಗುತ್ತಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.<br /> <br /> `ಶಿವಕುಮಾರ ಸ್ವಾಮಿಗಳ ಗುರುವಂದನೆ ಅಂದರೆ ಅದೊಂದು ಜಾತ್ಯತೀತ ಮತ್ತು ಪಕ್ಷಾತೀತ ಕಾರ್ಯಕ್ರಮ. ಯಾರೇ ಮುಖ್ಯಮಂತ್ರಿಯಾಗಿದ್ದರೂ ಗುರುವಂದನೆ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದು ರೂಢಿ. ಆದರೆ, ಈ ಸಲ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖರನ್ನೂ ಕಡೆಗಣಿಸಿ ಕಾರ್ಯಕ್ರಮ ಮಾಡಲಾಗುತ್ತಿದೆ. ಇದು ನೋವಿನ ಸಂಗತಿ~ ಎಂದು ಗುರುವಂದನೆ ಕಾರ್ಯಕ್ರಮದ ರೂವಾರಿಗಳಲ್ಲಿ ಒಬ್ಬರಾದ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದರು.<br /> <br /> `ಈಗ ನಡೆಯುತ್ತಿರುವ ಗುರುವಂದನೆ ಒಂದು ರೀತಿ ಪಕ್ಷವೊಂದರ ಕಾರ್ಯಕ್ರಮದಂತೆ ಇದೆ ಎಂದು ಸ್ಥಳೀಯರು ದೂರವಾಣಿ ಕರೆ ಮಾಡಿ ಹೇಳುತ್ತಿದ್ದಾರೆ. ಪಕ್ಷಾತೀತವಾದ ಮಠದಲ್ಲಿ ಈ ರೀತಿ ಮಾಡುವುದು ಸರಿಯೇ ಎಂದೂ ಜನ ಕೇಳುತ್ತಿದ್ದಾರೆ~ ಎಂದರು.<br /> <br /> `ನಾನು ಮಠದ ಪರಮಭಕ್ತ. ಶಿವಕುಮಾರ ಸ್ವಾಮೀಜಿ ನನ್ನ ಪಾಲಿಗೆ ನಡೆದಾಡುವ ದೇವರು. ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಭದ್ರತೆ, ಅದೂ ಇದೂ ಎಂದು ನೆಪ ಹೇಳಿ ಸಮಾಜದ ಪ್ರಮುಖರನ್ನು ಕಾರ್ಯಕ್ರಮದಿಂದ ಹೊರಗೆ ಇಡಲಾಗಿದೆ. <br /> <br /> ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಷ್ಟ್ರಪತಿಗಳು ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಗಲೂ ವೇದಿಕೆಯಲ್ಲಿ 12 ಮಂದಿ ಗಣ್ಯರಿಗೆ ಕೂರಲು ವ್ಯವಸ್ಥೆ ಮಾಡಿಸಿದ್ದೆ. ಈಗಲೂ ಅದೇ ರೀತಿ ಮಾಡಬಹುದಿತ್ತು. ಒಂದು ಪಕ್ಷದ ಅಧ್ಯಕ್ಷರನ್ನು ಮಾತ್ರ ಕೂರಿಸಿಕೊಂಡು ಗುರುವಂದನೆ ಮಾಡುವುದು ಸರಿಯೇ ಎಂದು ಜನ ಕೇಳುತ್ತಿದ್ದಾರೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>