<p>ಗುಲ್ಬರ್ಗ: ಕೇಂದ್ರ ಸರ್ಕಾರದ ವತಿಯಿಂದ ಗುಲ್ಬರ್ಗದಲ್ಲಿ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆಯನ್ನು ಆರಂಭಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಸುಬೋಧಕಾಂತ ಸಹಾಯ್ ಶುಕ್ರವಾರ ಘೋಷಿಸಿದರು.<br /> <br /> ನಗರದ ಹೊರವಲಯದಲ್ಲಿರುವ ಉಪ್ಪಿನ ತೋಟದಲ್ಲಿ ‘ಗುಲ್ಬರ್ಗ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> ಈ ಭಾಗದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆ ಸ್ಥಾಪನೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.<br /> <br /> “ಬೇರೆ ಕಡೆಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಕರ್ನಾಟಕದತ್ತ ಹರಿದು ಬರುತ್ತಿರುವುದು ಕಡಿಮೆ. ಹಾಗಾಗಿ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆಯನ್ನು ಆರಂಭಿಸಿದರೆ, ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ನೀಡಲು ಸಾಧ್ಯವಿದೆ” ಎಂದರು.<br /> <br /> ಗುಲ್ಬರ್ಗದ ಐತಿಹಾಸಿಕ ಕೋಟೆಯಲ್ಲಿ ಧ್ವನಿ ಬೆಳಕು ಕಾರ್ಯಕ್ರಮವನ್ನು ಶೀಘ್ರವೇ ಆರಂಭಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಸಹಾಯ್ ಪ್ರಕಟಿಸಿದರು.<br /> ಬೀದರ್, ಗುಲ್ಬರ್ಗ ಹಾಗೂ ವಿಜಾಪುರ ಜಿಲ್ಲೆಗಳನ್ನು ಒಳಗೊಂಡ ಈ ಭಾಗವನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಐತಿಹಾಸಿಕವಾಗಿ ಸಂಪದ್ಭರಿತವಾದ ಈ 3 ಜಿಲ್ಲೆಗಳ ಇಡೀ ಭಾಗಕ್ಕೆ ವಿಶೇಷ ಯೋಜನೆ ರೂಪಿಸುವುದಾಗಿ ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಐದು ಎಕರೆ ಜಮೀನು ನೀಡುವುದಾಗಿ ಪ್ರಕಟಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಲ್ಬರ್ಗ: ಕೇಂದ್ರ ಸರ್ಕಾರದ ವತಿಯಿಂದ ಗುಲ್ಬರ್ಗದಲ್ಲಿ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆಯನ್ನು ಆರಂಭಿಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಸುಬೋಧಕಾಂತ ಸಹಾಯ್ ಶುಕ್ರವಾರ ಘೋಷಿಸಿದರು.<br /> <br /> ನಗರದ ಹೊರವಲಯದಲ್ಲಿರುವ ಉಪ್ಪಿನ ತೋಟದಲ್ಲಿ ‘ಗುಲ್ಬರ್ಗ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> ಈ ಭಾಗದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆ ಸ್ಥಾಪನೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.<br /> <br /> “ಬೇರೆ ಕಡೆಗೆ ಹೋಲಿಸಿದರೆ ಪ್ರವಾಸಿಗರ ಸಂಖ್ಯೆ ಕರ್ನಾಟಕದತ್ತ ಹರಿದು ಬರುತ್ತಿರುವುದು ಕಡಿಮೆ. ಹಾಗಾಗಿ ಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆಯನ್ನು ಆರಂಭಿಸಿದರೆ, ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ನೀಡಲು ಸಾಧ್ಯವಿದೆ” ಎಂದರು.<br /> <br /> ಗುಲ್ಬರ್ಗದ ಐತಿಹಾಸಿಕ ಕೋಟೆಯಲ್ಲಿ ಧ್ವನಿ ಬೆಳಕು ಕಾರ್ಯಕ್ರಮವನ್ನು ಶೀಘ್ರವೇ ಆರಂಭಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಸಹಾಯ್ ಪ್ರಕಟಿಸಿದರು.<br /> ಬೀದರ್, ಗುಲ್ಬರ್ಗ ಹಾಗೂ ವಿಜಾಪುರ ಜಿಲ್ಲೆಗಳನ್ನು ಒಳಗೊಂಡ ಈ ಭಾಗವನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಐತಿಹಾಸಿಕವಾಗಿ ಸಂಪದ್ಭರಿತವಾದ ಈ 3 ಜಿಲ್ಲೆಗಳ ಇಡೀ ಭಾಗಕ್ಕೆ ವಿಶೇಷ ಯೋಜನೆ ರೂಪಿಸುವುದಾಗಿ ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಪ್ರವಾಸೋದ್ಯಮ ನಿರ್ವಹಣಾ ಸಂಸ್ಥೆ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಐದು ಎಕರೆ ಜಮೀನು ನೀಡುವುದಾಗಿ ಪ್ರಕಟಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>