<p><strong>ಮೈಸೂರು:</strong> ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ ಬೆಟ್ಟದೂರು ಬಳಿ ಇರುವ ಗೊಮ್ಮಟಗಿರಿಯ ಬಾಹುಬಲಿಗೆ ಸಾವಿರಾರು ಭಕ್ತರ ಜಯ ಘೋಷದ ನಡುವೆ ಭಾನುವಾರ 62ನೇ ಮಸ್ತಕಾಭಿಷೇಕ ವಿಜೃಂಭಣೆಯಿಂದ ನೆರವೇರಿತು.</p>.<p>ಚಾಮರಾಜನಗರ ಜಿಲ್ಲೆ ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ನೇತೃತ್ವ ಹಾಗೂ ಪಾಶುನಾಥ ಮತ್ತು ಎನ್.ಡಿ.ಲೋಕಪಾಲ್ ಪೌರೋಹಿತ್ಯದಲ್ಲಿ ಬೆಳಿಗ್ಗೆ 10 ಗಂಟೆಗೆ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.</p>.<p>ಸರಿಯಾಗಿ ಮಧ್ಯಾಹ್ನ 12.45ಕ್ಕೆ 18 ಅಡಿ ಎತ್ತರದ ಗೊಮ್ಮಟೇಶ್ವರ ಮೂರ್ತಿಗೆ ಸ್ವಾಮೀಜಿ ಪೌರೋಹಿತ್ಯದಲ್ಲಿ ಗಂಗಾಜಲ, ಅರಿಶಿಣ, ಕುಂಕುಮ, ಚಂದನ, ಎಳೆನೀರು, ಕಷಾಯ, ಅಷ್ಟಗಂಧ ಹಾಗೂ ಹಾಲಿನ ಅಭಿಷೇಕ ಕೈಗೊಳ್ಳಲಾಯಿತು.</p>.<p>ಬೆಟ್ಟದಗಿರಿಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತಾದಿಗಳು ಅಭಿಷೇಕ ಆರಂಭವಾಗುತ್ತಿದ್ದಂತೆ `ವಿರಾಟ್ ಬಾಹುಬಲಿಗೆ ಜಯವಾಗಲಿ, ಅಹಿಂಸಾ ಪರಧರ್ಮನಿಗೆ ಜಯವಾಗಲಿ~ ಎಂದು ಘೋಷಣೆ ಕೂಗುತ್ತ ಭಕ್ತಿ ಭಾವದಿಂದ ಬಾಹುಬಲಿಯ ದರ್ಶನ ಪಡೆದರು.</p>.<p>ಹಾಲು, ಕುಂಕುಮ, ಅರಿಶಿಣ, ಶ್ರೀಗಂಧ, ಚಂದನ ಅಭಿಷೇಕ ಮಾಡಿದಾಗ ಗೊಮ್ಮಟಮೂರ್ತಿಯನ್ನು ನೋಡಿದ ಭಕ್ತರು ಭಾವಪರವಶರಾದರು. ಬಳಿಕ ಬತ್ತದ ಅರಳು, ಸಕ್ಕರೆ ಮತ್ತು ಪುಷ್ಪಗಳಿಂದ ಅಭಿಷೇಕ ನೆರವೇರಿಸಿದರು. ಇದಕ್ಕೂ ಮುನ್ನ ಅಭಿಷೇಕ ಮಾಡುವ ಚತುಷ್ಕೋನ ಕಳಶ ಹಾಗೂ ಪೂರ್ಣಕುಂಭಗಳನ್ನು ಹರಾಜು ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಕನಕಗಿರಿ ಕ್ಷೇತ್ರದ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, `ಕಳೆದ 62 ವರ್ಷಗಳಿಂದ ಮಸ್ತಕಾಭಿಷೇಕ ನಡೆಯುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುತ್ತಾರೆ. ಗೊಮ್ಮಟಗಿರಿಯು ಧಾರ್ಮಿಕವಾಗಿ ಪುಣ್ಯಸ್ಥಳವಾಗಿದ್ದು, ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೂಲ ಸೌಕರ್ಯ ಒದಗಿಸಲು ಗಮನ ಹರಿಸಬೇಕು~ ಎಂದು ಹೇಳಿದರು. ಗೊಮ್ಮಟಗಿರಿ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಸುರೇಶ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ ಬೆಟ್ಟದೂರು ಬಳಿ ಇರುವ ಗೊಮ್ಮಟಗಿರಿಯ ಬಾಹುಬಲಿಗೆ ಸಾವಿರಾರು ಭಕ್ತರ ಜಯ ಘೋಷದ ನಡುವೆ ಭಾನುವಾರ 62ನೇ ಮಸ್ತಕಾಭಿಷೇಕ ವಿಜೃಂಭಣೆಯಿಂದ ನೆರವೇರಿತು.</p>.<p>ಚಾಮರಾಜನಗರ ಜಿಲ್ಲೆ ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ನೇತೃತ್ವ ಹಾಗೂ ಪಾಶುನಾಥ ಮತ್ತು ಎನ್.ಡಿ.ಲೋಕಪಾಲ್ ಪೌರೋಹಿತ್ಯದಲ್ಲಿ ಬೆಳಿಗ್ಗೆ 10 ಗಂಟೆಗೆ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.</p>.<p>ಸರಿಯಾಗಿ ಮಧ್ಯಾಹ್ನ 12.45ಕ್ಕೆ 18 ಅಡಿ ಎತ್ತರದ ಗೊಮ್ಮಟೇಶ್ವರ ಮೂರ್ತಿಗೆ ಸ್ವಾಮೀಜಿ ಪೌರೋಹಿತ್ಯದಲ್ಲಿ ಗಂಗಾಜಲ, ಅರಿಶಿಣ, ಕುಂಕುಮ, ಚಂದನ, ಎಳೆನೀರು, ಕಷಾಯ, ಅಷ್ಟಗಂಧ ಹಾಗೂ ಹಾಲಿನ ಅಭಿಷೇಕ ಕೈಗೊಳ್ಳಲಾಯಿತು.</p>.<p>ಬೆಟ್ಟದಗಿರಿಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತಾದಿಗಳು ಅಭಿಷೇಕ ಆರಂಭವಾಗುತ್ತಿದ್ದಂತೆ `ವಿರಾಟ್ ಬಾಹುಬಲಿಗೆ ಜಯವಾಗಲಿ, ಅಹಿಂಸಾ ಪರಧರ್ಮನಿಗೆ ಜಯವಾಗಲಿ~ ಎಂದು ಘೋಷಣೆ ಕೂಗುತ್ತ ಭಕ್ತಿ ಭಾವದಿಂದ ಬಾಹುಬಲಿಯ ದರ್ಶನ ಪಡೆದರು.</p>.<p>ಹಾಲು, ಕುಂಕುಮ, ಅರಿಶಿಣ, ಶ್ರೀಗಂಧ, ಚಂದನ ಅಭಿಷೇಕ ಮಾಡಿದಾಗ ಗೊಮ್ಮಟಮೂರ್ತಿಯನ್ನು ನೋಡಿದ ಭಕ್ತರು ಭಾವಪರವಶರಾದರು. ಬಳಿಕ ಬತ್ತದ ಅರಳು, ಸಕ್ಕರೆ ಮತ್ತು ಪುಷ್ಪಗಳಿಂದ ಅಭಿಷೇಕ ನೆರವೇರಿಸಿದರು. ಇದಕ್ಕೂ ಮುನ್ನ ಅಭಿಷೇಕ ಮಾಡುವ ಚತುಷ್ಕೋನ ಕಳಶ ಹಾಗೂ ಪೂರ್ಣಕುಂಭಗಳನ್ನು ಹರಾಜು ಮಾಡಲಾಯಿತು.</p>.<p>ಈ ಸಂದರ್ಭದಲ್ಲಿ ಕನಕಗಿರಿ ಕ್ಷೇತ್ರದ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, `ಕಳೆದ 62 ವರ್ಷಗಳಿಂದ ಮಸ್ತಕಾಭಿಷೇಕ ನಡೆಯುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುತ್ತಾರೆ. ಗೊಮ್ಮಟಗಿರಿಯು ಧಾರ್ಮಿಕವಾಗಿ ಪುಣ್ಯಸ್ಥಳವಾಗಿದ್ದು, ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೂಲ ಸೌಕರ್ಯ ಒದಗಿಸಲು ಗಮನ ಹರಿಸಬೇಕು~ ಎಂದು ಹೇಳಿದರು. ಗೊಮ್ಮಟಗಿರಿ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಸುರೇಶ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>