ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರ ಅಧಿಕಾರ ಅವಧಿಯನ್ನು ಬರುವ ಮಾರ್ಚ್ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೇ 28ಕ್ಕೆ ಚನ್ನಬಸಪ್ಪನವರ ಅವಧಿ ಪೂರ್ಣಗೊಂಡಿತ್ತು. ಆದರೆ ಅವರು ಕೈಗೆತ್ತಿಕೊಂಡಿರುವ ಜಾನಪದ ನಿಘಂಟು ರಚನೆಯ ಕಾರ್ಯ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಕೆಲ ಸಾಹಿತಿಗಳ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅವಧಿ ವಿಸ್ತರಣೆಗೆ ಸೂಚಿಸಿದ್ದರು. ಆ ಪ್ರಕಾರ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕ್ನಡ ಮ್ತು ಸಂ್ಕೃತಿ ಇಲಾಖೆಯ ಮೂಲಗಳು ತಿಳಿಸಿವೆ.