ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ಗೋವಾದ ಕಾಣಕೋಣ ಪಟ್ಟಣದಲ್ಲಿ ಕುಸಿದಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದ ಅವಶೇಷಗಳಡಿ ಸಿಲುಕಿ ಹಿರೇಹಡಗಲಿಯ ಬಂಗಾರಿ ಉದಯ (32), ಬಳಿಗಾರ ಜಬೀವುಲ್ಲಾ (20) ಸಾವಿಗೀಡಾಗಿದ್ದಾರೆ.
ಪಣಜಿ ವರದಿ: ಈ ನಡುವೆ ವಸತಿಗೃಹದ ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿದೆ.
ಇನ್ನೂ 20 ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.