‘ಮೊದಲು ಭಜರಂಗದಳದಲ್ಲಿದ್ದ ನವೀನ್, ನಂತರ ಅದನ್ನು ತೊರೆದು ‘ಹಿಂದೂ ಯುವಸೇನೆ’ ಎಂಬ ಹೊಸ ಸಂಘಟನೆ ಕಟ್ಟಿಕೊಂಡಿದ್ದ. ಪಿಸ್ತೂಲ್ ಹಾಗೂ ರಿವಾಲ್ವರ್ ಇಟ್ಟುಕೊಳ್ಳುವ ಶೋಕಿ ಹೊಂದಿರುವ ಈತ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಶಸ್ತ್ರಾಸ್ತ್ರ ಮಾರಾಟಗಾರರ ಜತೆ ನಂಟು ಹೊಂದಿದ್ದ. ಮೊಬೈಲ್ ಕರೆಗಳ ವಿವರ (ಸಿಡಿಆರ್) ಪರಿಶೀಲಿಸಿದಾಗ ಈತನ ಸಂಪರ್ಕಗಳು ಗೊತ್ತಾದವು. ಹೀಗಾಗಿ, ಗೌರಿ ಹತ್ಯೆ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.