ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರಕ್ಕೆ ಯಾವುದೇ ಧಕ್ಕೆಯಾಗಿರಲಿಲ್ಲ. ಜನನಿಬಿಡ ಸ್ಥಳವಾಗಿರುವ ದೊಡ್ಡಅಂಗಡಿ ಬೀದಿ, ಚಿಕ್ಕಅಂಗಡಿ ಬೀದಿ, ಬಿ.ರಾಚಯ್ಯ ಜೋಡಿರಸ್ತೆ, ಗುಂಡ್ಲುಪೇಟೆ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಕೃತ್ಯ ಖಂಡಿಸಿ ಶ್ರೀಕೆಂಪನಾಂಜಾಂಬ ಸಮೇತ ಶ್ರೀಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಭಕ್ತ ಮಂಡಳಿಯ ನೇತೃತ್ವದಡಿ ಪ್ರತಿಭಟನೆ ನಡೆಯಿತು. ಮೆರವಣಿಗೆ ನಡೆಸಿದ ಭಕ್ತರು ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.