<p><strong>ಬೆಂಗಳೂರು</strong>: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿಗಳು ಮೈದುಂಬಿಕೊಂಡು ಹರಿಯುತ್ತಿವೆ, ಕೆಳಮಟ್ಟದ ಐದು ಸೇತುವೆಗಳು ಜಲಾವೃತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ.<br /> <br /> ರಾಜ್ಯದಲ್ಲಿ ಶನಿವಾರ ಮಳೆಯ ಅಬ್ಬರ ಕಡಿಮೆ ಆಗಿತ್ತು. ತುಂಗಾ ಹಾಗೂ ಭದ್ರಾ ಜಲಾನಯ ಪ್ರದೇಶದಲ್ಲಿ ಮಳೆ ಆಗಿರುವುದರಿಂದ ಈ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ. ಆದರೆ ಶರಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಮುಖ ಆಗಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಕಡಿಮೆ ಆಗಿದೆ.<br /> <strong><br /> ಚಿಕ್ಕೋಡಿ ವರದಿ: </strong>ಮಹಾರಾಷ್ಟ್ರದಿಂದ ರಾಜಾಪೂರ ಬ್ಯಾರೇಜ್ ಮೂಲಕ ಒಟ್ಟು 55,060 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ತಾಲ್ಲೂಕಿನ ಕಲ್ಲೋಳ- ಯಡೂರ, ಅಕ್ಕೋಳ- ಸಿದ್ನಾಳ, ಜತ್ರಾಟ- ಭೀವಶಿ, ಮಲಿಕವಾಡ- ದತ್ತವಾಡ ಮತ್ತು ಸದಲಗಾ- ಬೋರಗಾಂವ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವ ಕೆಳಮಟ್ಟದ ಸೇತುವೆಗಳು ನದಿ ನೀರಿನಲ್ಲಿ ಮುಳುಗಡೆಯಾಗಿವೆ. ಇದರಿಂದ ಸಾರಿಗೆ-ಸಂಚಾರ ಸ್ಥಗಿತಗೊಂಡಿದೆ. <br /> <br /> ಮಹಾರಾಷ್ಟ್ರದ ಇಚಲಕರಂಜಿ, ಹುಪರಿ, ಮುಂತಾದ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆಗಳು ಜಲಾವೃತವಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸುತ್ತುಬಳಿಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. <br /> <br /> ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕಾರು ದಿನಗಳಿಂದ ಬಿಡದೇ ಸುರಿಯುತ್ತಿದ್ದ ಮಳೆರಾಯನ ಆರ್ಭಟ ಶನಿವಾರ ಕೊಂಚ ತಗ್ಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಅಧಿಕಾರಿಗಳ ಪೂರ್ವಭಾವಿ ಸಭೆ ಸೋಮವಾರ ನಡೆಯಲಿದೆ ಎಂದು ಪ್ರಭಾರ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ~ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ಮಂಗಳೂರು ವರದಿ:</strong> ಸುಬ್ರಹ್ಮಣ್ಯ- ಸಕಲೇಶಪುರದ ನಡುವೆ ಗುಡ್ಡ ಕುಸಿದು ರೈಲ್ವೆ ಹಳಿಗೆ ಬಿದ್ದಿರುವ ಮಣ್ಣು ತೆರವುಗೊಳಿಸುವ ಕಾರ್ಯ ಇನ್ನೂ ಪೂರ್ಣಗೊಳ್ಳದ ಕಾರಣ ಮಂಗಳೂರು-ಯಶವಂತಪುರ ರೈಲು ಯಾನವನ್ನು ಎರಡನೇ ದಿನವೂ ರದ್ದು ಪಡಿಸಲಾಗಿದೆ.<br /> <br /> ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಗುಂಡ್ಯ ಹೊಳೆ, ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ಪ್ರವಾಹ ತಗ್ಗಿದೆ. <br /> <br /> ಶನಿವಾರ ಬೆಳಿಗ್ಗೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 55.40 ಮಿ.ಮೀ, ಪುತ್ತೂರಿನಲ್ಲಿ 26.10 ಮಿ.ಮೀ, ಮೂಡುಬಿದಿರೆಯಲ್ಲಿ 15.80 ಮಿ.ಮೀ, ಕಡಬದಲ್ಲಿ 15.20 ಮಿ.ಮೀ, ಸುಳ್ಯದಲ್ಲಿ 13.60 ಮಿ.ಮೀ, ಬಂಟ್ವಾಳದಲ್ಲಿ 10.60 ಮಿ.ಮೀ, ಮಂಗಳೂರಿನಲ್ಲಿ 4.40 ಮಿ.ಮೀ ಮಳೆಯಾಗಿದೆ.<br /> <br /> <strong>ಶಿವಮೊಗ್ಗ ವರದಿ: </strong>ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ತಗ್ಗಿದ್ದರೂ, ತುಂಗಾ ಹಾಗೂ ಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. <br /> <br /> ಕಳೆದ 24 ಗಂಟೆಗಳಲ್ಲಿ ಆಗುಂಬೆ ಸುತ್ತಮುತ್ತ 120 ಮಿ.ಮೀ. ಮಳೆಯಾಗಿದೆ. ಇದರಿಂದ ಗಾಜನೂರು ಜಲಾಶಯದ ಒಳಹರಿವು 54,720 ಕ್ಯೂಸೆಕ್ಗೆ ಏರಿಕೆಯಾಗಿದೆ. ಈಗಾಗಲೇ ಜಲಾಶಯದ ನೀರಿನಮಟ್ಟ ಗರಿಷ್ಠ ಮಟ್ಟ 588.24 ಅಡಿಗೆ ತಲುಪಿರುವುದರಿಂದ, ಹೊರಹರಿವನ್ನು 55 ಸಾವಿರ ಕ್ಯೂಸೆಕ್ಗೆ ಏರಿಸಲಾಗಿದೆ.<br /> ಭದ್ರಾ ಜಲಾಶಯದ ಒಳಹರಿವು 25,097 ಕ್ಯೂಸೆಕ್ಗೆ ಏರಿಕೆಯಾಗಿದೆ.<br /> <br /> ಜಲಾಶಯದ ನೀರಿನಮಟ್ಟ 146.3 ಅಡಿ ತಲುಪಿದೆ. ಆದರೆ, ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದು, ಒಳಹರಿವು 27,205 ಕ್ಯೂಸೆಕ್ಗೆ ಇಳಿಕೆಯಾಗಿದೆ. ಹೊರಹರಿವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಜಲಾಶಯದ ನೀರಿನಮಟ್ಟ 1,766.25 ಅಡಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಉಪನದಿಗಳು ಮೈದುಂಬಿಕೊಂಡು ಹರಿಯುತ್ತಿವೆ, ಕೆಳಮಟ್ಟದ ಐದು ಸೇತುವೆಗಳು ಜಲಾವೃತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ.<br /> <br /> ರಾಜ್ಯದಲ್ಲಿ ಶನಿವಾರ ಮಳೆಯ ಅಬ್ಬರ ಕಡಿಮೆ ಆಗಿತ್ತು. ತುಂಗಾ ಹಾಗೂ ಭದ್ರಾ ಜಲಾನಯ ಪ್ರದೇಶದಲ್ಲಿ ಮಳೆ ಆಗಿರುವುದರಿಂದ ಈ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ. ಆದರೆ ಶರಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಮುಖ ಆಗಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಕಡಿಮೆ ಆಗಿದೆ.<br /> <strong><br /> ಚಿಕ್ಕೋಡಿ ವರದಿ: </strong>ಮಹಾರಾಷ್ಟ್ರದಿಂದ ರಾಜಾಪೂರ ಬ್ಯಾರೇಜ್ ಮೂಲಕ ಒಟ್ಟು 55,060 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ತಾಲ್ಲೂಕಿನ ಕಲ್ಲೋಳ- ಯಡೂರ, ಅಕ್ಕೋಳ- ಸಿದ್ನಾಳ, ಜತ್ರಾಟ- ಭೀವಶಿ, ಮಲಿಕವಾಡ- ದತ್ತವಾಡ ಮತ್ತು ಸದಲಗಾ- ಬೋರಗಾಂವ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವ ಕೆಳಮಟ್ಟದ ಸೇತುವೆಗಳು ನದಿ ನೀರಿನಲ್ಲಿ ಮುಳುಗಡೆಯಾಗಿವೆ. ಇದರಿಂದ ಸಾರಿಗೆ-ಸಂಚಾರ ಸ್ಥಗಿತಗೊಂಡಿದೆ. <br /> <br /> ಮಹಾರಾಷ್ಟ್ರದ ಇಚಲಕರಂಜಿ, ಹುಪರಿ, ಮುಂತಾದ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆಗಳು ಜಲಾವೃತವಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸುತ್ತುಬಳಿಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. <br /> <br /> ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕಾರು ದಿನಗಳಿಂದ ಬಿಡದೇ ಸುರಿಯುತ್ತಿದ್ದ ಮಳೆರಾಯನ ಆರ್ಭಟ ಶನಿವಾರ ಕೊಂಚ ತಗ್ಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಅಧಿಕಾರಿಗಳ ಪೂರ್ವಭಾವಿ ಸಭೆ ಸೋಮವಾರ ನಡೆಯಲಿದೆ ಎಂದು ಪ್ರಭಾರ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ~ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ಮಂಗಳೂರು ವರದಿ:</strong> ಸುಬ್ರಹ್ಮಣ್ಯ- ಸಕಲೇಶಪುರದ ನಡುವೆ ಗುಡ್ಡ ಕುಸಿದು ರೈಲ್ವೆ ಹಳಿಗೆ ಬಿದ್ದಿರುವ ಮಣ್ಣು ತೆರವುಗೊಳಿಸುವ ಕಾರ್ಯ ಇನ್ನೂ ಪೂರ್ಣಗೊಳ್ಳದ ಕಾರಣ ಮಂಗಳೂರು-ಯಶವಂತಪುರ ರೈಲು ಯಾನವನ್ನು ಎರಡನೇ ದಿನವೂ ರದ್ದು ಪಡಿಸಲಾಗಿದೆ.<br /> <br /> ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಗುಂಡ್ಯ ಹೊಳೆ, ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳ ಪ್ರವಾಹ ತಗ್ಗಿದೆ. <br /> <br /> ಶನಿವಾರ ಬೆಳಿಗ್ಗೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 55.40 ಮಿ.ಮೀ, ಪುತ್ತೂರಿನಲ್ಲಿ 26.10 ಮಿ.ಮೀ, ಮೂಡುಬಿದಿರೆಯಲ್ಲಿ 15.80 ಮಿ.ಮೀ, ಕಡಬದಲ್ಲಿ 15.20 ಮಿ.ಮೀ, ಸುಳ್ಯದಲ್ಲಿ 13.60 ಮಿ.ಮೀ, ಬಂಟ್ವಾಳದಲ್ಲಿ 10.60 ಮಿ.ಮೀ, ಮಂಗಳೂರಿನಲ್ಲಿ 4.40 ಮಿ.ಮೀ ಮಳೆಯಾಗಿದೆ.<br /> <br /> <strong>ಶಿವಮೊಗ್ಗ ವರದಿ: </strong>ಜಿಲ್ಲೆಯಲ್ಲಿ ಶನಿವಾರ ಮಳೆಯ ಪ್ರಮಾಣ ತಗ್ಗಿದ್ದರೂ, ತುಂಗಾ ಹಾಗೂ ಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. <br /> <br /> ಕಳೆದ 24 ಗಂಟೆಗಳಲ್ಲಿ ಆಗುಂಬೆ ಸುತ್ತಮುತ್ತ 120 ಮಿ.ಮೀ. ಮಳೆಯಾಗಿದೆ. ಇದರಿಂದ ಗಾಜನೂರು ಜಲಾಶಯದ ಒಳಹರಿವು 54,720 ಕ್ಯೂಸೆಕ್ಗೆ ಏರಿಕೆಯಾಗಿದೆ. ಈಗಾಗಲೇ ಜಲಾಶಯದ ನೀರಿನಮಟ್ಟ ಗರಿಷ್ಠ ಮಟ್ಟ 588.24 ಅಡಿಗೆ ತಲುಪಿರುವುದರಿಂದ, ಹೊರಹರಿವನ್ನು 55 ಸಾವಿರ ಕ್ಯೂಸೆಕ್ಗೆ ಏರಿಸಲಾಗಿದೆ.<br /> ಭದ್ರಾ ಜಲಾಶಯದ ಒಳಹರಿವು 25,097 ಕ್ಯೂಸೆಕ್ಗೆ ಏರಿಕೆಯಾಗಿದೆ.<br /> <br /> ಜಲಾಶಯದ ನೀರಿನಮಟ್ಟ 146.3 ಅಡಿ ತಲುಪಿದೆ. ಆದರೆ, ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದು, ಒಳಹರಿವು 27,205 ಕ್ಯೂಸೆಕ್ಗೆ ಇಳಿಕೆಯಾಗಿದೆ. ಹೊರಹರಿವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಜಲಾಶಯದ ನೀರಿನಮಟ್ಟ 1,766.25 ಅಡಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>