<p><strong>ಬೆಂಗಳೂರು: </strong>‘ಚಿಕ್ಕೋಡಿ ಜಿಲ್ಲಾ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಬೇಕು’ ಎಂದು ಬಿಜೆಪಿಯ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ಶುಕ್ರವಾರ ಒತ್ತಾಯಿಸಿದರು.</p>.<p>‘ರಾಜ್ಯದಲ್ಲೇ ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದೆ. ಅಥಣಿಯ ಕೊನೆ ಹಳ್ಳಿಯಿಂದ ಬೆಳಗಾವಿಗೆ 200 ಕಿಲೋ ಮೀಟರ್ಗೂ ಹೆಚ್ಚು ದೂರವಿದೆ. ಹೀಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಹಿಂದೆ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಚಿಕ್ಕೋಡಿ ಜಿಲ್ಲೆ ರಚನೆಗೆ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಸಾಧ್ಯವಾಗಿಲ್ಲ’ ಎಂದರು.</p>.<p>‘ಚಿಕ್ಕೋಡಿಯನ್ನು ಜಿಲ್ಲೆ ಮಾಡುವಂತೆ ನಾಗರಿಕರು ಹಲವು ಬಾರಿ ಧರಣಿಗಳನ್ನು ನಡೆಸಿದ್ದಾರೆ. ಈಗ ಫೆ.5ರಿಂದ ಮತ್ತೆ ಜನರು ಧರಣಿ ನಡೆಸುತ್ತಿದ್ದಾರೆ. ಜಿಲ್ಲಾ ಹೋರಾಟ ಸಮಿತಿ ಮನವಿಗೆ ಸರ್ಕಾರ ಸ್ಪಂದಿಸಿ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.<br /> ***<br /> <strong>‘ಜಿಲ್ಲೆ ರಚನೆ ಘೋಷಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ’</strong><br /> <strong>ಚಿಕ್ಕೋಡಿ:</strong> ‘ಪ್ರತ್ಯೇಕ ಜಿಲ್ಲೆ ಘೋಷಣೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಬೇಡಿಕೆ ಪ್ರತಿಧ್ವನಿಸಲಿದೆ’ ಎಂದು ವಿಧಾನ ಪರಿಷತ್ ಸದಸ್ಯ<br /> ಮಹಾಂತೇಶ ಕವಟಗಿಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ್ದ ‘ಚಿಕ್ಕೋಡಿ ಬಂದ್’ ವೇಳೆ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗಾವಿಗೆ ಬರುತ್ತಿದ್ದು, ಈ ಸಂದರ್ಭದಲ್ಲಿ ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಬೆಂಗಳೂರು, ಮೈಸೂರು ಭಾಗದಲ್ಲಿ ಈ ರೀತಿಯ ಹೋರಾಟಗಳು ನಡೆದಿದ್ದರೆ ಸರ್ಕಾರ ತಕ್ಷಣ ಸ್ಪಂದಿಸುತ್ತಿತ್ತು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಚಿಕ್ಕೋಡಿ ಜಿಲ್ಲಾ ರಚನೆಗೆ ಸಂಬಂಧಿಸಿದಂತೆ ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಬೇಕು’ ಎಂದು ಬಿಜೆಪಿಯ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ಶುಕ್ರವಾರ ಒತ್ತಾಯಿಸಿದರು.</p>.<p>‘ರಾಜ್ಯದಲ್ಲೇ ಬೆಳಗಾವಿ ಅತಿ ದೊಡ್ಡ ಜಿಲ್ಲೆಯಾಗಿದೆ. ಅಥಣಿಯ ಕೊನೆ ಹಳ್ಳಿಯಿಂದ ಬೆಳಗಾವಿಗೆ 200 ಕಿಲೋ ಮೀಟರ್ಗೂ ಹೆಚ್ಚು ದೂರವಿದೆ. ಹೀಗಾಗಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಹಿಂದೆ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಚಿಕ್ಕೋಡಿ ಜಿಲ್ಲೆ ರಚನೆಗೆ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಸಾಧ್ಯವಾಗಿಲ್ಲ’ ಎಂದರು.</p>.<p>‘ಚಿಕ್ಕೋಡಿಯನ್ನು ಜಿಲ್ಲೆ ಮಾಡುವಂತೆ ನಾಗರಿಕರು ಹಲವು ಬಾರಿ ಧರಣಿಗಳನ್ನು ನಡೆಸಿದ್ದಾರೆ. ಈಗ ಫೆ.5ರಿಂದ ಮತ್ತೆ ಜನರು ಧರಣಿ ನಡೆಸುತ್ತಿದ್ದಾರೆ. ಜಿಲ್ಲಾ ಹೋರಾಟ ಸಮಿತಿ ಮನವಿಗೆ ಸರ್ಕಾರ ಸ್ಪಂದಿಸಿ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು’ ಎಂದು ಒತ್ತಾಯಿಸಿದರು.<br /> ***<br /> <strong>‘ಜಿಲ್ಲೆ ರಚನೆ ಘೋಷಿಸದಿದ್ದರೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ’</strong><br /> <strong>ಚಿಕ್ಕೋಡಿ:</strong> ‘ಪ್ರತ್ಯೇಕ ಜಿಲ್ಲೆ ಘೋಷಣೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಬೇಡಿಕೆ ಪ್ರತಿಧ್ವನಿಸಲಿದೆ’ ಎಂದು ವಿಧಾನ ಪರಿಷತ್ ಸದಸ್ಯ<br /> ಮಹಾಂತೇಶ ಕವಟಗಿಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ್ದ ‘ಚಿಕ್ಕೋಡಿ ಬಂದ್’ ವೇಳೆ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗಾವಿಗೆ ಬರುತ್ತಿದ್ದು, ಈ ಸಂದರ್ಭದಲ್ಲಿ ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ಹೊಸ ಜಿಲ್ಲೆಗಳನ್ನಾಗಿ ಘೋಷಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಬೆಂಗಳೂರು, ಮೈಸೂರು ಭಾಗದಲ್ಲಿ ಈ ರೀತಿಯ ಹೋರಾಟಗಳು ನಡೆದಿದ್ದರೆ ಸರ್ಕಾರ ತಕ್ಷಣ ಸ್ಪಂದಿಸುತ್ತಿತ್ತು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>