<p><strong>ಹುಬ್ಬಳ್ಳಿ: </strong>`ಬಹುಕೋಟಿ ಮೊತ್ತದ 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ಹೆಸರೂ ಕೇಳಿ ಬಂದಿರುವುದರಿಂದ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು~ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್.ಎನ್. ಅನಂತಕುಮಾರ್ ಆಗ್ರಹಿಸಿದರು.<br /> <br /> ಕೊಪ್ಪಳ ಉಪ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಶುಕ್ರವಾರ ವಿಶೇಷ ವಿಮಾನದಲ್ಲಿ ನಗರಕ್ಕೆ ಬಂದಿಳಿದ ಅವರು ವರದಿಗಾರರ ಜೊತೆ ಮಾತನಾಡಿದರು. `ಚಿದಂಬರಂ ತಮ್ಮ ಹುದ್ದೆಯಲ್ಲಿ ಮುಂದುವರಿದರೆ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ರಾಜೀನಾಮೆ ನೀಡದೆ ಅವರ ಮುಂದೆ ಬೇರೆ ಮಾರ್ಗವೇ ಇಲ್ಲ~ ಎಂದು ಹೇಳಿದರು.<br /> <br /> `ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ಅಣ್ಣಾ ಹಜಾರೆ ಹಾಗೂ ಬಾಬಾ ರಾಮದೇವ್ ಅವರ ಹೋರಾಟ ದಮನ ಮಾಡಲು ಚಿದಂಬರಂ ಹಾಗೂ ಕಪಿಲ್ ಸಿಬಲ್ ಮುಂದಾಗಿದ್ದು ಏಕೆ ಎಂಬುದು ಈಗ ಅರ್ಥವಾಗುತ್ತಿದೆ~ ಎಂದು ಅವರು ಲೇವಡಿ ಮಾಡಿದರು. <br /> <br /> `ಉತ್ತರ ಭಾರತದಲ್ಲಿ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದ ನಾನು ರಾಜ್ಯ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಇವತ್ತು ಪ್ರಚಾರಕ್ಕೆ ಬಂದಿದ್ದೇನೆ. <br /> <br /> ಈ ವಿಷಯವಾಗಿ ಯಾವುದೇ ಗೊಂದಲ ಅನಗತ್ಯ~ ಎಂದ ಅವರು, `ಕೊಪ್ಪಳದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>`ಬಹುಕೋಟಿ ಮೊತ್ತದ 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ಹೆಸರೂ ಕೇಳಿ ಬಂದಿರುವುದರಿಂದ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು~ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್.ಎನ್. ಅನಂತಕುಮಾರ್ ಆಗ್ರಹಿಸಿದರು.<br /> <br /> ಕೊಪ್ಪಳ ಉಪ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಶುಕ್ರವಾರ ವಿಶೇಷ ವಿಮಾನದಲ್ಲಿ ನಗರಕ್ಕೆ ಬಂದಿಳಿದ ಅವರು ವರದಿಗಾರರ ಜೊತೆ ಮಾತನಾಡಿದರು. `ಚಿದಂಬರಂ ತಮ್ಮ ಹುದ್ದೆಯಲ್ಲಿ ಮುಂದುವರಿದರೆ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ರಾಜೀನಾಮೆ ನೀಡದೆ ಅವರ ಮುಂದೆ ಬೇರೆ ಮಾರ್ಗವೇ ಇಲ್ಲ~ ಎಂದು ಹೇಳಿದರು.<br /> <br /> `ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ಅಣ್ಣಾ ಹಜಾರೆ ಹಾಗೂ ಬಾಬಾ ರಾಮದೇವ್ ಅವರ ಹೋರಾಟ ದಮನ ಮಾಡಲು ಚಿದಂಬರಂ ಹಾಗೂ ಕಪಿಲ್ ಸಿಬಲ್ ಮುಂದಾಗಿದ್ದು ಏಕೆ ಎಂಬುದು ಈಗ ಅರ್ಥವಾಗುತ್ತಿದೆ~ ಎಂದು ಅವರು ಲೇವಡಿ ಮಾಡಿದರು. <br /> <br /> `ಉತ್ತರ ಭಾರತದಲ್ಲಿ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದ ನಾನು ರಾಜ್ಯ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಇವತ್ತು ಪ್ರಚಾರಕ್ಕೆ ಬಂದಿದ್ದೇನೆ. <br /> <br /> ಈ ವಿಷಯವಾಗಿ ಯಾವುದೇ ಗೊಂದಲ ಅನಗತ್ಯ~ ಎಂದ ಅವರು, `ಕೊಪ್ಪಳದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>