ಶಾಂತವ್ವನ ಸಾವಿಗೆ ಶಾಸಕರ ಪುತ್ರ ಭೀಮಸೇನ ಚಿಮ್ಮನಕಟ್ಟಿ, ತಹಶೀಲ್ದಾರ್ ಎಸ್.ರವಿಚಂದ್ರ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿದರು. ಈ ವೇಳೆ ಆರೋಪಿಗಳ ಪರವಾಗಿ ರಾಜಿ ಪಂಚಾಯ್ತಿಗೆ ಬಂದ ಬೆಂಬಲಿಗನಿಗೂ ಥಳಿಸಿದ್ದಾರೆ. ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರ ಮನವೊಲಿಸಿದರು. ಸಂಜೆ ಮರಣೋತ್ತರ ಪರೀಕ್ಷೆ ನಡೆಸಿ ಶಾಂತವ್ವನ ಶವ ಊರಿಗೆ ಕಳುಹಿಸಿಕೊಡಲಾಯಿತು.