<p><strong>ಮೈಸೂರು: </strong>ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾಗಿದ್ದ ಡಾ.ಎಂ.ಅಕಬರ ಅಲಿ (91) ಭಾನುವಾರ ಇಲ್ಲಿನ ತಮ್ಮ ಮನೆಯಲ್ಲಿ ನಿಧನರಾದರು.</p>.<p>ಅವರಿಗೆ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.<br /> <br /> ‘ವಿಷಸಿಂಧು’, ‘ಅನ್ನ’, ‘ನವಚೇತನ, ‘ಅಕಬರ ಅಲಿಯ ಚುಟುಕುಗಳು’, ‘ಸುಮನ ಸೌರಭ’, ‘ಗಂಧಕೇಶ್ವರ’, ‘ಬೆಳಕಿನ ಆರಾಧನೆ’ ‘ಕಸಿಗುಲಾಬಿಯ ಕಥನ’ ಸೇರಿದಂತೆ 15ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದರು.<br /> <br /> ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಡಿವಿಜಿ ಮುಕ್ತಕ ಪ್ರಶಸ್ತಿ ಮೊದಲಾದ ಪುರಸ್ಕಾರಗಳಿಗೆ ಭಾಜನರಾಗಿದ್ದರು. ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.<br /> <br /> ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಉಳ್ಳಾಗಡ್ಡಿ ಖಾನಾಪುರದವರು. ಹುಟ್ಟೂರಿನಲ್ಲಿ ಉರ್ದು ಮಾಧ್ಯಮದಲ್ಲಿ ಪ್ರಾಥಮಿಕ (ನಾಲ್ಕನೇ ತರಗತಿವರೆಗೆ) ಶಿಕ್ಷಣ ಪೂರೈಸಿದರು. ನಂತರ ಕನ್ನಡ ಮಾಧ್ಯಮ ಸೇರಿದರು. ಬೆಳಗಾವಿಯಲ್ಲಿ ಪ್ರೌಢಶಾಲೆ, ಕಾಲೇಜು, ಮುಂಬೈ ವಿಶ್ವವಿದ್ಯಾಲಯದಲ್ಲಿ ಬಿ.ಎ (ಆನರ್ಸ್) ಮುಗಿಸಿದರು.<br /> <br /> ಪುಣೆ ವಿಶ್ವವಿದ್ಯಾಲಯದಲ್ಲಿ ಎಂ.ಎ,ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಸರ್ವಜ್ಞನ ಸಮಾಜದರ್ಶನ ಮತ್ತು ಸಾಹಿತ್ಯ ಸತ್ವ’ ಕುರಿತು ಪಿಎಚ್.ಡಿ ಪಡೆದರು. ಪ್ರೌಢಶಾಲಾ ಹಂತದಿಂದ ಸ್ನಾತಕೋತ್ತರ ಪದವಿವರೆಗೆ 35 ವರ್ಷ ನಾಡಿನ ವಿವಿಧೆಡೆ ಬೋಧಕರಾಗಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾಗಿದ್ದ ಡಾ.ಎಂ.ಅಕಬರ ಅಲಿ (91) ಭಾನುವಾರ ಇಲ್ಲಿನ ತಮ್ಮ ಮನೆಯಲ್ಲಿ ನಿಧನರಾದರು.</p>.<p>ಅವರಿಗೆ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ.<br /> <br /> ‘ವಿಷಸಿಂಧು’, ‘ಅನ್ನ’, ‘ನವಚೇತನ, ‘ಅಕಬರ ಅಲಿಯ ಚುಟುಕುಗಳು’, ‘ಸುಮನ ಸೌರಭ’, ‘ಗಂಧಕೇಶ್ವರ’, ‘ಬೆಳಕಿನ ಆರಾಧನೆ’ ‘ಕಸಿಗುಲಾಬಿಯ ಕಥನ’ ಸೇರಿದಂತೆ 15ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದರು.<br /> <br /> ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಡಿವಿಜಿ ಮುಕ್ತಕ ಪ್ರಶಸ್ತಿ ಮೊದಲಾದ ಪುರಸ್ಕಾರಗಳಿಗೆ ಭಾಜನರಾಗಿದ್ದರು. ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.<br /> <br /> ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಉಳ್ಳಾಗಡ್ಡಿ ಖಾನಾಪುರದವರು. ಹುಟ್ಟೂರಿನಲ್ಲಿ ಉರ್ದು ಮಾಧ್ಯಮದಲ್ಲಿ ಪ್ರಾಥಮಿಕ (ನಾಲ್ಕನೇ ತರಗತಿವರೆಗೆ) ಶಿಕ್ಷಣ ಪೂರೈಸಿದರು. ನಂತರ ಕನ್ನಡ ಮಾಧ್ಯಮ ಸೇರಿದರು. ಬೆಳಗಾವಿಯಲ್ಲಿ ಪ್ರೌಢಶಾಲೆ, ಕಾಲೇಜು, ಮುಂಬೈ ವಿಶ್ವವಿದ್ಯಾಲಯದಲ್ಲಿ ಬಿ.ಎ (ಆನರ್ಸ್) ಮುಗಿಸಿದರು.<br /> <br /> ಪುಣೆ ವಿಶ್ವವಿದ್ಯಾಲಯದಲ್ಲಿ ಎಂ.ಎ,ಮೈಸೂರು ವಿಶ್ವವಿದ್ಯಾಲಯದಲ್ಲಿ ‘ಸರ್ವಜ್ಞನ ಸಮಾಜದರ್ಶನ ಮತ್ತು ಸಾಹಿತ್ಯ ಸತ್ವ’ ಕುರಿತು ಪಿಎಚ್.ಡಿ ಪಡೆದರು. ಪ್ರೌಢಶಾಲಾ ಹಂತದಿಂದ ಸ್ನಾತಕೋತ್ತರ ಪದವಿವರೆಗೆ 35 ವರ್ಷ ನಾಡಿನ ವಿವಿಧೆಡೆ ಬೋಧಕರಾಗಿ ಸೇವೆ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>