<p><strong>ಮೂಡುಬಿದಿರೆ:</strong> ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 'ಆಳ್ವಾಸ್ ವಿರಾಸತ್' ಜನವರಿ 12ರಿಂದ 14ವರೆಗೆ ಇಲ್ಲಿಗೆ ಸಮೀಪದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.</p>.<p>‘ವಿರಾಸತ್ ಕಾರ್ಯಕ್ರಮಗಳು ದಿನವೊಂದಕ್ಕೆ ಎರಡು ಅವಧಿಗಳದ್ದಾಗಿದ್ದು ಪೂರ್ವಾರ್ಧದಲ್ಲಿ ಸಂಗೀತ, ಉತ್ತಾರಾರ್ಧದಲ್ಲಿ ನೃತ್ಯ ನಡೆಯಲಿದೆ. ಪ್ರತಿದಿನ ಸಂಜೆ 6 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಗಳು ರಾತ್ರಿ 10.30ಕ್ಕೆ ಮುಕ್ತಾಯಗೊಳ್ಳುತ್ತವೆ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜನವರಿ 12ರಂದು ಸಂಜೆ 5.15ರಿಂದ ಸಾಂಸ್ಕೃತಿಕ ತಂಡಗಳ ಮೆರವಣಿಗೆ ಇರಲಿದೆ. 150 ಅಡಿ ಉದ್ದ, 60 ಅಡಿ ಅಗಲದ ಬೃಹತ್ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 40 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ನೋಡಲು ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದರು.</p>.<p>ಮಾಹಿತಿಗೆ 08258-261229 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ:</strong> ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 'ಆಳ್ವಾಸ್ ವಿರಾಸತ್' ಜನವರಿ 12ರಿಂದ 14ವರೆಗೆ ಇಲ್ಲಿಗೆ ಸಮೀಪದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.</p>.<p>‘ವಿರಾಸತ್ ಕಾರ್ಯಕ್ರಮಗಳು ದಿನವೊಂದಕ್ಕೆ ಎರಡು ಅವಧಿಗಳದ್ದಾಗಿದ್ದು ಪೂರ್ವಾರ್ಧದಲ್ಲಿ ಸಂಗೀತ, ಉತ್ತಾರಾರ್ಧದಲ್ಲಿ ನೃತ್ಯ ನಡೆಯಲಿದೆ. ಪ್ರತಿದಿನ ಸಂಜೆ 6 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಗಳು ರಾತ್ರಿ 10.30ಕ್ಕೆ ಮುಕ್ತಾಯಗೊಳ್ಳುತ್ತವೆ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜನವರಿ 12ರಂದು ಸಂಜೆ 5.15ರಿಂದ ಸಾಂಸ್ಕೃತಿಕ ತಂಡಗಳ ಮೆರವಣಿಗೆ ಇರಲಿದೆ. 150 ಅಡಿ ಉದ್ದ, 60 ಅಡಿ ಅಗಲದ ಬೃಹತ್ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 40 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ನೋಡಲು ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದರು.</p>.<p>ಮಾಹಿತಿಗೆ 08258-261229 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>