ಶುಕ್ರವಾರ ಬೆಳಗ್ಗೆಯಿಂದ ಸರಣಿ ಸಭೆ ನಡೆಸಿದ ಬಳಿಕ ಹಿರಿಯ ಸಚಿವರ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸಚಿವ ಸಂಪುಟದ ಎಂಟು ಸಂಪುಟ ದರ್ಜೆ, ಮೂವರು ರಾಜ್ಯ ಖಾತೆ ಸಚಿವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕೊಲೆ, ಕೊಲೆಯತ್ನ, ವಂಚನೆ, 420 ಹೀಗೆ ವಿವಿಧ ಕೇಸುಗಳಿವೆ. ಅವರೆಲ್ಲ ಸಚಿವ ಸಂಪುಟದಲ್ಲಿ ಮುಂದುವರಿದಿಲ್ಲವೇ ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು.