ಮುಖ್ಯಮಂತ್ರಿ ಆದಿಯಾಗಿ ಹಲವು ನಾಯಕರು ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಂತೆ ಸೌಭಾಗ್ಯ ಅವರಿಗೆ ಸೂಚಿಸಿದ್ದರು. ಆದರೆ, 'ಚುನಾವಣೆಗೆ ಟಿಕೆಟ್ ಖಚಿತವಾಗುವವರೆಗೂ ರಾಜೀನಾಮೆ ನೀಡುವುದಿಲ್ಲ' ಎಂದು ಅವರು ಹಠ ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ 2017 ರ ನವೆಂಬರ್ 28 ರಂದು ಸೌಭಾಗ್ಯ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿತ್ತು.