<p><strong>ಬೆಂಗಳೂರು: </strong>ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಕುರಿತು ಕರ್ನಾಟಕ ಜ್ಞಾನ ಆಯೋಗ ಚಿಂತನೆ ನಡೆಸಿದೆ. ಅಲ್ಲದೆ, ಉನ್ನತ ಶಿಕ್ಷಣ ಕೇಂದ್ರಗಳ ಬೋಧನಾ ಗುಣಮಟ್ಟ ಹೇಗಿದೆ ಎಂಬುದನ್ನು ಪರಿಶೀಲನೆಗೆ ಒಳಪಡಿಸುವ ಯೋಚನೆಯೂ ಆಯೋಗದ ಮುಂದಿದೆ.<br /> <br /> ವಿಕಾಸಸೌಧದಲ್ಲಿ ಬುಧವಾರ ನಡೆದ ಜ್ಞಾನ ಆಯೋಗದ 14ನೇ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. <br /> <br /> ಆಯೋಗದ ಅವಧಿ ಎರಡು ವರ್ಷಗಳವರೆಗೆ ವಿಸ್ತರಣೆಯಾದ ನಂತರ ನಡೆದಿರುವ ಮೊದಲ ಸಭೆ ಇದಾಗಿದೆ.<br /> ಸಭೆಯ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದ ಆಯೋಗದ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಅವರು, `ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಟಕುವಂತೆ ಮಾಡುವ ಸಲಹೆ ಇಂದಿನ (ಬುಧವಾರ) ಸಭೆಯಲ್ಲಿ ಸದಸ್ಯರಿಂದ ಬಂದಿದೆ. ಈ ಕುರಿತು ಆಯೋಗ ಗಮನ ಹರಿಸಲಿದೆ~ ಎಂದು ತಿಳಿಸಿದರು.<br /> <br /> ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಅಧ್ಯಾಪಕರ ಬೋಧನೆ ವಿದ್ಯಾರ್ಥಿಗಳಿಗೆ ಎಷ್ಟು ಪ್ರಯೋಜನಕಾರಿಯಾಗಿದೆ, ಅವರ ಪಠ್ಯ ಸಂಬಂಧಿ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಎಷ್ಟು ಪರಿಣಾಮ ಬೀರುತ್ತಿದೆ ಎಂಬ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸಲಹೆಯೂ ಸದಸ್ಯರಿಂದ ಬಂದಿದೆ. ಈ ಕುರಿತೂ ಆಯೋಗ ಗಮನ ಹರಿಸಲಿದೆ ಎಂದು ಡಾ. ಕಸ್ತೂರಿ ರಂಗನ್ ಹೇಳಿದರು.<br /> <br /> ಆಯೋಗಕ್ಕೆ ಉಳಿದಿರುವ ಒಂದೂವರೆ ವರ್ಷದ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಬಲವರ್ಧನೆ, ವೃತ್ತಿ ಶಿಕ್ಷಣ ನೀತಿ ಅಭಿವೃದ್ಧಿಪಡಿಸುವುದು, ಆಯುಷ್ ಇಲಾಖೆಯನ್ನು ಮುಖ್ಯವಾಹಿನಿಗೆ ತರುವುದು, ಸಾಂಪ್ರದಾಯಿಕ ಕೌಶಲ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಕೆಲಸ ಮಾಡಲಾಗುವುದು ಎಂದರು.<br /> <br /> ಆಯೋಗದ ಮೂರು ವರ್ಷಗಳ ಮೊದಲ ಅವಧಿ ಪೂರ್ಣಗೊಂಡಾಗ ಸರ್ಕಾರಕ್ಕೆ 60 ಶಿಫಾರಸುಗಳನ್ನು ಸಲ್ಲಿಸಲಾಗಿತ್ತು. ಈ ಪೈಕಿ ಒಟ್ಟು 12 ಶಿಫಾರಸುಗಳು ಅನುಷ್ಠಾನಕ್ಕೆ ಬಂದಿವೆ, 22 ಶಿಫಾರಸುಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ ಎಂದು ಹೇಳಿದರು.<br /> <br /> <strong>ಜ್ಞಾನ ಫೆಲೊ:</strong> ಒಟ್ಟು 19 `ಜ್ಞಾನ ಫೆಲೊ~ಗಳು ರಾಜ್ಯ ಸರ್ಕಾರದ ಒಂಬತ್ತು ವಿವಿಧ ಇಲಾಖೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರೊ.ಎಂ.ಕೆ. ಶ್ರೀಧರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಕುರಿತು ಕರ್ನಾಟಕ ಜ್ಞಾನ ಆಯೋಗ ಚಿಂತನೆ ನಡೆಸಿದೆ. ಅಲ್ಲದೆ, ಉನ್ನತ ಶಿಕ್ಷಣ ಕೇಂದ್ರಗಳ ಬೋಧನಾ ಗುಣಮಟ್ಟ ಹೇಗಿದೆ ಎಂಬುದನ್ನು ಪರಿಶೀಲನೆಗೆ ಒಳಪಡಿಸುವ ಯೋಚನೆಯೂ ಆಯೋಗದ ಮುಂದಿದೆ.<br /> <br /> ವಿಕಾಸಸೌಧದಲ್ಲಿ ಬುಧವಾರ ನಡೆದ ಜ್ಞಾನ ಆಯೋಗದ 14ನೇ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. <br /> <br /> ಆಯೋಗದ ಅವಧಿ ಎರಡು ವರ್ಷಗಳವರೆಗೆ ವಿಸ್ತರಣೆಯಾದ ನಂತರ ನಡೆದಿರುವ ಮೊದಲ ಸಭೆ ಇದಾಗಿದೆ.<br /> ಸಭೆಯ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದ ಆಯೋಗದ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಅವರು, `ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಎಟಕುವಂತೆ ಮಾಡುವ ಸಲಹೆ ಇಂದಿನ (ಬುಧವಾರ) ಸಭೆಯಲ್ಲಿ ಸದಸ್ಯರಿಂದ ಬಂದಿದೆ. ಈ ಕುರಿತು ಆಯೋಗ ಗಮನ ಹರಿಸಲಿದೆ~ ಎಂದು ತಿಳಿಸಿದರು.<br /> <br /> ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಅಧ್ಯಾಪಕರ ಬೋಧನೆ ವಿದ್ಯಾರ್ಥಿಗಳಿಗೆ ಎಷ್ಟು ಪ್ರಯೋಜನಕಾರಿಯಾಗಿದೆ, ಅವರ ಪಠ್ಯ ಸಂಬಂಧಿ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಯ ಮೇಲೆ ಎಷ್ಟು ಪರಿಣಾಮ ಬೀರುತ್ತಿದೆ ಎಂಬ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸಲಹೆಯೂ ಸದಸ್ಯರಿಂದ ಬಂದಿದೆ. ಈ ಕುರಿತೂ ಆಯೋಗ ಗಮನ ಹರಿಸಲಿದೆ ಎಂದು ಡಾ. ಕಸ್ತೂರಿ ರಂಗನ್ ಹೇಳಿದರು.<br /> <br /> ಆಯೋಗಕ್ಕೆ ಉಳಿದಿರುವ ಒಂದೂವರೆ ವರ್ಷದ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳ ಬಲವರ್ಧನೆ, ವೃತ್ತಿ ಶಿಕ್ಷಣ ನೀತಿ ಅಭಿವೃದ್ಧಿಪಡಿಸುವುದು, ಆಯುಷ್ ಇಲಾಖೆಯನ್ನು ಮುಖ್ಯವಾಹಿನಿಗೆ ತರುವುದು, ಸಾಂಪ್ರದಾಯಿಕ ಕೌಶಲ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಕೆಲಸ ಮಾಡಲಾಗುವುದು ಎಂದರು.<br /> <br /> ಆಯೋಗದ ಮೂರು ವರ್ಷಗಳ ಮೊದಲ ಅವಧಿ ಪೂರ್ಣಗೊಂಡಾಗ ಸರ್ಕಾರಕ್ಕೆ 60 ಶಿಫಾರಸುಗಳನ್ನು ಸಲ್ಲಿಸಲಾಗಿತ್ತು. ಈ ಪೈಕಿ ಒಟ್ಟು 12 ಶಿಫಾರಸುಗಳು ಅನುಷ್ಠಾನಕ್ಕೆ ಬಂದಿವೆ, 22 ಶಿಫಾರಸುಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ ಎಂದು ಹೇಳಿದರು.<br /> <br /> <strong>ಜ್ಞಾನ ಫೆಲೊ:</strong> ಒಟ್ಟು 19 `ಜ್ಞಾನ ಫೆಲೊ~ಗಳು ರಾಜ್ಯ ಸರ್ಕಾರದ ಒಂಬತ್ತು ವಿವಿಧ ಇಲಾಖೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರೊ.ಎಂ.ಕೆ. ಶ್ರೀಧರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>