<p><strong>ಬೆಂಗಳೂರು</strong>: ಚಿತ್ರನಟಿ ಪೂಜಾ ಗಾಂಧಿ ಜೆಡಿಎಸ್ ಸೇರಿದ ಬೆನ್ನಲ್ಲೇ ಮತ್ತೊಬ್ಬ ನಟಿ ಮಾಳವಿಕಾ ಅವಿನಾಶ್ ಶುಕ್ರವಾರ ಜೆಡಿಎಸ್ಗೆ ಸೇರ್ಪಡೆಯಾದರು.<br /> <br /> ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಾಳವಿಕಾ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಮಾಳವಿಕಾ ಪತಿ-ನಟ ಅವಿನಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> <br /> `ಮೊದಲಿನಿಂದಲೂ ಜೆಡಿಎಸ್ ಬಗ್ಗೆ ಒಲವಿತ್ತು. ನಿರ್ದೇಶಕ ಟಿ.ಎನ್.ಸೀತಾ ರಾಂ ಪ್ರೇರಣೆ ಮತ್ತು ದೇವೇಗೌಡರ ಕಾರ್ಯವೈಖರಿ ಇಷ್ಟವಾದ್ದರಿಂದ ಈ ಪಕ್ಷವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ಹೇಳಿದರು. <br /> <br /> ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದು ಕೊಳ್ಳುತ್ತೇನೆ~ ಎಂದು ಮಾವಳಿಕಾ ಹೇಳಿದರು.<br /> ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ, ಮಾಜಿ ಸಚಿವ ಆರ್.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರನಟಿ ಪೂಜಾ ಗಾಂಧಿ ಜೆಡಿಎಸ್ ಸೇರಿದ ಬೆನ್ನಲ್ಲೇ ಮತ್ತೊಬ್ಬ ನಟಿ ಮಾಳವಿಕಾ ಅವಿನಾಶ್ ಶುಕ್ರವಾರ ಜೆಡಿಎಸ್ಗೆ ಸೇರ್ಪಡೆಯಾದರು.<br /> <br /> ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಾಳವಿಕಾ ಅವರಿಗೆ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಮಾಳವಿಕಾ ಪತಿ-ನಟ ಅವಿನಾಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> <br /> `ಮೊದಲಿನಿಂದಲೂ ಜೆಡಿಎಸ್ ಬಗ್ಗೆ ಒಲವಿತ್ತು. ನಿರ್ದೇಶಕ ಟಿ.ಎನ್.ಸೀತಾ ರಾಂ ಪ್ರೇರಣೆ ಮತ್ತು ದೇವೇಗೌಡರ ಕಾರ್ಯವೈಖರಿ ಇಷ್ಟವಾದ್ದರಿಂದ ಈ ಪಕ್ಷವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ಹೇಳಿದರು. <br /> <br /> ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದು ಕೊಳ್ಳುತ್ತೇನೆ~ ಎಂದು ಮಾವಳಿಕಾ ಹೇಳಿದರು.<br /> ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ, ಮಾಜಿ ಸಚಿವ ಆರ್.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>