ಬೆಂಗಳೂರು: ಜ್ಞಾನಭಾರತಿ ಆವರಣ ದಲ್ಲಿ ಕಳೆದ ವರ್ಷದ ಅಕ್ಟೋಬರ್ನಲ್ಲಿ ನೇಪಾಳ ಮೂಲದ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮತ್ತೊಬ್ಬ ಆರೋಪಿ ರಾಜ ಅಲಿ ಯಸ್ ಮುತ್ತುರಾಜ (24) ಎಂಬಾತ ನನ್ನು ಜ್ಞಾನಭಾರತಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
‘ಅತ್ಯಾಚಾರ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ರಾಮ ನಗರ ತಾಲ್ಲೂಕಿನ ಕೈಲಂಚ ಬಳಿಯ ಮೆಟಾರಿದೊಡ್ಡಿ ಗ್ರಾಮದ ರಾಜ, ಒಂಬತ್ತು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ. ಘಟನೆ ನಂತರ ಆತ ಆನೇಕಲ್ ತಾಲ್ಲೂಕಿನ ಕೆಬ್ಬೆದೊಡ್ಡಿ ಗ್ರಾಮದಲ್ಲಿ ಅಡುಗೆ ಕೆಲಸ ಮಾಡಿ ಕೊಂಡಿದ್ದ’ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
‘ಗಣೇಶ ಹಬ್ಬದ ದಿನದಂದು ಆತ ಪತ್ನಿಯ ತವರೂರು ಹಾರೋಹಳ್ಳಿ ಸಮೀಪದ ಇಳಿಗರಪಾಳ್ಯಕ್ಕೆ ಬರಬಹುದೆಂಬ ಮಾಹಿತಿ ಇತ್ತು. ಆದರೆ, ಆತ ಇಳಿಗರಪಾಳ್ಯಕ್ಕೆ ಬರದೆ, ಕೆಬ್ಬೆದೊಡ್ಡಿ ಗ್ರಾಮದಲ್ಲೇ ಉಳಿದುಕೊಂಡಿದ್ದ. ಮಂಗಳವಾರ ಬೆಳಗಿನ ಜಾವ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ’ ಎಂದರು.
2012ರ ಅ.12ರ ರಾತ್ರಿ ಜ್ಞಾನಭಾರತಿ ಆವರಣದಲ್ಲಿ ಗಂಧದಮರ ಕಳವು ಮಾಡಲು ಬಂದಿದ್ದ 8 ಮಂದಿ ಆರೋಪಿಗಳು, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆ ನಡೆದ ಒಂದು ವಾರದಲ್ಲಿ ಒಬ್ಬ ಬಾಲ ಆರೋಪಿ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ಇದೇ ತಿಂಗಳ 6ರಂದು ನಗರದ 9ನೇ ಎಸಿಎಂಎಂ ನ್ಯಾಯಾಲಯವು ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿಗಳ ಪತ್ತೆ ಮಾಡಿದ ಸಿಬ್ಬಂದಿ ಹಾಗೂ ಸರ್ಕಾರಿ ಅಭಿಯೋಜಕ ಚಂದ್ರಶೇಖರ್ ಹಿರೇಮಠ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮಾ ಪಚಾವೊ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.