ಕೆಜೆಪಿ ಪಕ್ಷ ಸ್ಥಾಪಿಸಿದ್ದ ಯಡಿಯೂರಪ್ಪ, ಟಿಪ್ಪು ವೇಷ ತೊಟ್ಟು, ಖಡ್ಗ ಹಿಡಿದು ಪೋಜು ನೀಡಿದ್ದರು. ಆಗ ಶೋಭಾ ಕರಂದ್ಲಾಜೆ ಕೂಡ ಇದ್ದರು. ಈಗ ಮಾತ್ರ ‘ನನ್ನ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಬೇಡ’ ಎಂದು ಹೇಳುತ್ತಿದ್ದಾರೆ. ವಿಶ್ರಾಂತ ಕುಲಪತಿ ಶೇಖ್ ಅಲಿಯವರು ಟಿಪ್ಪು ಕುರಿತು ಬರೆದ ಪುಸ್ತಕಕ್ಕೆ ಆಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮುನ್ನುಡಿ ಬರೆದಿದ್ದರು. ಆಗ ಟಿಪ್ಪು ಸುಲ್ತಾನ್ ದೇಶಭಕ್ತ ಎಂದು ಕರೆದಿದ್ದ ಶೆಟ್ಟರ, ಈಗ ರಾಗ ಬದಲಿಸಿದ್ದಾರೆ. ಇದು ಬಿಜೆಪಿ ಮುಖಂಡರ ನಿಜವಾದ ಬಣ್ಣ ಎಂದು ಹೇಳಿದರು.