<p>ಮೈಸೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು ಲೇಖಕಿ ಡಾ.ಎ.ಜಾನಕಿ ಅವರನ್ನು 2010 ನೇ ಸಾಲಿನ ಅತ್ಯುತ್ತಮ ಅನುವಾದ ಪ್ರಶಸ್ತಿಗೆ ಆಯ್ಕೆ ಮಾಡಿದೆ. <br /> <br /> ಖ್ಯಾತ ಹಿಂದಿ ಸಾಹಿತಿ ದಿ.ಮುನ್ಷಿ ಪ್ರೇಮ್ಚಂದ್ ಅವರ ‘ಗೋದಾನ’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ತಾಮ್ರಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಆಗಸ್ಟ್ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.<br /> <br /> ಪರಿಚಯ: 1964ರಲ್ಲಿ ಮಹಾರಾಣಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದರು. 1993ರಲ್ಲಿ ಅದೇ ಕಾಲೇಜಿಗೆ ಪ್ರಾಂಶುಪಾಲರಾದರು. 1995-97ರ ಅವಧಿಯಲ್ಲಿ ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರು, 1997- 2001ರಲ್ಲಿ ಧಾರವಾಡದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದರು.<br /> <br /> 1943ರಲ್ಲಿ ಜನಿಸಿದ ಇವರು, 25ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿದ್ದಾರೆ. ಪ್ರೇಮ್ಚಂದ್ರ 300 ಸಣ್ಣ ಕಥೆಗಳನ್ನು 15 ಸಂಪುಟಗಳಲ್ಲಿ ಅನುವಾದ ಮಾಡಿದ್ದಾರೆ. ಪ್ರೇಮ್ಚಂದ್ರ ಪ್ರಮುಖ ಕೃತಿಗ ಳಾದ ‘ಸೇವಾಸದನ್’, ಗಬನ್, ವರದಾನ್ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು ಲೇಖಕಿ ಡಾ.ಎ.ಜಾನಕಿ ಅವರನ್ನು 2010 ನೇ ಸಾಲಿನ ಅತ್ಯುತ್ತಮ ಅನುವಾದ ಪ್ರಶಸ್ತಿಗೆ ಆಯ್ಕೆ ಮಾಡಿದೆ. <br /> <br /> ಖ್ಯಾತ ಹಿಂದಿ ಸಾಹಿತಿ ದಿ.ಮುನ್ಷಿ ಪ್ರೇಮ್ಚಂದ್ ಅವರ ‘ಗೋದಾನ’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ತಾಮ್ರಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ. ಆಗಸ್ಟ್ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.<br /> <br /> ಪರಿಚಯ: 1964ರಲ್ಲಿ ಮಹಾರಾಣಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದರು. 1993ರಲ್ಲಿ ಅದೇ ಕಾಲೇಜಿಗೆ ಪ್ರಾಂಶುಪಾಲರಾದರು. 1995-97ರ ಅವಧಿಯಲ್ಲಿ ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರು, 1997- 2001ರಲ್ಲಿ ಧಾರವಾಡದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದರು.<br /> <br /> 1943ರಲ್ಲಿ ಜನಿಸಿದ ಇವರು, 25ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿದ್ದಾರೆ. ಪ್ರೇಮ್ಚಂದ್ರ 300 ಸಣ್ಣ ಕಥೆಗಳನ್ನು 15 ಸಂಪುಟಗಳಲ್ಲಿ ಅನುವಾದ ಮಾಡಿದ್ದಾರೆ. ಪ್ರೇಮ್ಚಂದ್ರ ಪ್ರಮುಖ ಕೃತಿಗ ಳಾದ ‘ಸೇವಾಸದನ್’, ಗಬನ್, ವರದಾನ್ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>